Districts

ಇಂದ್ರಾಳಿ ಬಿಡ್ಜ್‌ ಮೇಲೆ ನಿತ್ಯಾನಂದ ಒಳಕಾಡು ವಿನೂತನ ಪ್ರತಿಭಟನೆ

ಉಡುಪಿ; ಇಂದ್ರಾಳಿ ಬ್ರಿಡ್ಜ್ ಬಳಿಯ ರಸ್ತೆ ಅವ್ಯವಸ್ಥೆಯನ್ನು ಖಂಡಿಸಿ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ವಿನೂತನ ಪ್ರತಿಭಟನೆ ನಡೆಸಿದರು. ಹೊಂಡಗಳ ರಸ್ತೆಗೆ ಆರತಿ ಎತ್ತಿ, ತೆಂಗಿನ ಕಾಯಿ ಒಡೆದ ನಿತ್ಯಾನಂದ ಒಳಕಾಡು ಅವರು, ರಸ್ತೆಯಲ್ಲಿ ಉರುಳು ಸೇವೆ ಮಾಡಿದರು.

ಮೂರು ವರ್ಷಗಳಿಂದ ರಸ್ತೆ ಹಾಳಾದರೂ ಯಾರೂ ಪ್ರಶ್ನೆ ಮಾಡುತ್ತಿಲ್ಲ. ಪ್ರತಿನಿತ್ಯ ಸಾವಿರಾರು ಜನರು ಈ ರಸ್ತೆಯಲ್ಲಿ ಸಂಚಾರ ಮಾಡುತ್ತಾರೆ. ಸ್ವತಃ ಮುಖ್ಯಮಂತ್ರಿಗಳೇ ಈ ರಸ್ತೆಯಲ್ಲಿ ಸಂಚಾರ ಮಾಡಿದರೂ ಅವರ ಕಣ್ಣಿಗೂ ಸಮಸ್ಯೆ ಕಂಡುಬಂದಿಲ್ಲ. ಇಲ್ಲಿನ ಹೊಂಡಗಳನ್ನು ರಿಪೇರಿ ಮಾಡಲು ಸ್ವತಃ ಮೋದಿ ಮತ್ತು ನಿತಿನ್ ಗಡ್ಕರಿ ಬರಬೇಕಾದ ಅನಿವಾರ್ಯತೆ ಇದೆ ಎಂದು ನಿತ್ಯಾನಂದ ಒಳಕಾಡು ಲೇವಡಿ ಮಾಡಿದರು. .

 

Share Post