DistrictsPolitics

ಜಾತಿ ಗಣತಿಗೆ ಬಿಜೆಪಿಯಿಂದ ವಿರೋಧವಿಲ್ಲ; ಬಿ.ವೈ.ವಿಜಯೇಂದ್ರ

ಬೆಂಗಳೂರು; ಜಾತಿಗಣತಿ ವರದಿಗೆ ಬಿಜೆಪಿಯಿಂದ ಯಾವುದೇ ವಿರೋಧ ಇಲ್ಲ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಜಾತಿ ಗಣತಿಗೆ ನಮ್ಮ ವಿರೋಧವಿಲ್ಲ. ಆದ್ರೆ ಅದನ್ನು ರಾಜಕೀಯ ಉದ್ದೇಶಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿರುವುದಕ್ಕೆ ನಮ್ಮ ವಿರೋಧವಿದೆ ಎಂದು ಹೇಳಿದರು.

ರಾಜ್ಯ  ಕಾಂಗ್ರೆಸ್ ಸರ್ಕಾರದ ಈ ರೀತಿಯ ನಡೆಯನ್ನು ಬಿಜೆಪಿ ಒಪ್ಪೋದಿಲ್ಲ. ಈ ವಿಚಾರದಲ್ಲಿ ನಮ್ಮ ನಿಲುವು ತುಂಬಾನೇ ಸ್ಪಷ್ಟವಿದೆ. ಈ ಹಿಂದೆ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಲೇ ಜಾತಿಗಣತಿ ಪ್ರಕ್ರಿಯೆ ಮುಗಿದಿತ್ತು.  ಆದ್ರೆ ಆಗ ಸ್ಪಷ್ಟ ನಿಲುವು ತೆಗೆದುಕೊಳ್ಳುವುದಕ್ಕೆ ಯಾಕೆ ಸಾಧ್ಯವಾಗಲಿಲ್ಲ ಎಂದು ವಿಜಯೇಂದ್ರ ಪ್ರಶ್ನೆ ಮಾಡಿದರು.

 

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಜಾತಿ ಗಣತಿ ವಿಚಾರವನ್ನು ಪ್ರಸ್ತಾಪ ಮಾಡ್ತಿದ್ದಾರೆ. ತಯಾರಾಗಿರುವ ಕಾಂತರಾಜು ವರದಿ ಬಗ್ಗೆ ಮಾಹಿತಿ ತೆಗೆದುಕೊಂಡಿಲ್ಲ. ಒಳಜಾತಿ ಪಕ್ಕಕ್ಕಿಟ್ಟು ಅವರಿಗೆ ಅನುಕೂಲ ಆಗುವ ವರದಿ ನೀಡಿದ್ದಾರೆ ಎಂದೂ ವಿಜಯೇಂದ್ರ ಆರೋಪ ಮಾಡಿದ್ದಾರೆ.

Share Post