DistrictsPolitics

ಈಶ್ವರಪ್ಪ ಅವರು ಕಾಂಗ್ರೆಸ್‌ಗೆ ಬಂದರೂ ಅಚ್ಚರಿ ಇಲ್ಲ; ಸಚಿವ ಎಂ.ಬಿ.ಪಾಟೀಲ್‌

ರಾಯಚೂರು; ಲೋಕಸಭಾ ಚುನಾವಣೆ ವೇಳೆಗೆ ಮಾಜಿ ಸಚಿವ ಈಶ್ವರಪ್ಪ ಅವರು ಕೂಡಾ ಕಾಂಗ್ರೆಸ್‌ಗೆ ಬಂದರೆ ಅಚ್ಚರಿ ಇಲ್ಲ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ರಾಯಚೂರಿನ ಲಿಂಗಸೂಗೂರಿನ ಮಾತನಾಡಿರುವ ಅವರು, ಈಶ್ವರಪ್ಪ ಅವರು ಕಾಂಗ್ರೆಸ್‌ಗೆ ಬರಲು ಮನಸ್ಸು ಮಾಡಬಹುದು. ಆದ್ರೆ ಅವರನ್ನು ಸೇರಿಸಿಕೊಳ್ಳಬೇಕಾದರೆ ನಾವು ವಿಚಾರ ಮಾಡುತ್ತೇವೆ ಎಂದಿದ್ದಾರೆ.

ಗುತ್ತಿಗೆದಾರರ ನಿವಾಸದ ಮೇಲೆ ಐಟಿ ದಾಳಿ  ನಡೆಯೋದು ಸಾಮಾನ್ಯದ ಸಂಗತಿ. ಬಿಜೆಪಿ ಅವಧಿಯಲ್ಲೂ ದಾಳಿಯಾಗಿತ್ತು, ಈಗಲೂ ಆಗಿದೆ. ಗುತ್ತಿಗೆದಾರರ ಮನೆ ಮೇಲಿನ ದಾಳಿಗೂ ಕಾಂಗ್ರೆಸ್​ಗೂ ಸಂಬಂಧವಿಲ್ಲ ಎಂದು ಸಚಿವರು ಇದೇ ವೇಳೆ ಹೇಳಿದ್ದಾರೆ.

 

Share Post