DistrictsPolitics

ಸೋಮಣ್ಣ ಅಲ್ಲ, ಯಾರೊಬ್ಬರೂ ಬಿಜೆಪಿ ಬಿಡೋದಿಲ್ಲ; ಮಾಜಿ ಸಿಎಂ ಬಿಎಸ್‌ವೈ

ಯಾದಗಿರಿ; ಸಚಿವ ವಿ.ಸೋಮಣ್ಣ ಸೇರಿ ಹಲವು ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುತ್ತಾರೆ ಎಂಬ ಸುದ್ದಿ ಹಬ್ಬಿದೆ. ಆದ್ರೆ ಇದ್ರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಯಾದಗಿರಿಯಲ್ಲಿ ಮಾತನಾಡಿದ ಅವರು, ಸೋಮಣ್ಣ ಸೇರಿ ಎಲ್ಲಾ ನಾಯಕರೂ ನಮ್ಮ ಜೊತೆಗೇ ಇದ್ದಾರೆ. ಬೆಂಗಳೂರಿಗೆ ಹೋದ ಮೇಲೆ ನಾನು ಅವರ ಜೊತೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಶಾಸಕ ಮಾಡಾಳ್ ವಿರೂಪಾಕ್ಷ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದ ಬಿಎಸ್‌ವೈ, ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ. ವಾಸ್ತವಿಕ ಸ್ಥಿತಿ ಏನು ಎನ್ನುವುದು ನಿಮಗೇ ಗೊತ್ತಿದೆ ಎಂದರು. ಮಾಡಾಳ್‌ ಅದ್ದೂರಿ ಮೆರವಣಿಗೆ ಬಗ್ಗೆ ನಾನು ಮಾತನಾಡಲ್ಲ ಎಂದರು.

Share Post