Districts

ನಿಗಮ-ಮಂಡಳಿಗಳಿಗೆ ಹೊಸ ಅಧ್ಯಕ್ಷರ ನೇಮಕ ಮಾಡುತ್ತೇವೆ; ಸಿಎಂ ಬೊಮ್ಮಾಯಿ

ಮೈಸೂರು;  ಒಂದೂವರೆ ವರ್ಷ ಅಧಿಕಾರ ಪೂರೈಸಿರುವ ನಿಗಮ- ಮಂಡಳಿಗಳ ಅಧ್ಯಕ್ಷರ ರಾಜಿನಾಮೆಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಿಗಮ-ಮಂಡಳಿಗಳ ಅಧ್ಯಕ್ಷರಿಂದ ರಾಜೀನಾಮೆ ಪಡೆದು ಹೊಸಬರಿಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ತಿಳಿಸಿದರು. 

ಮಳೆ ಹಾನಿ ಕುರಿತು ಸಂಜೆ ವೇಳೆಗೆ ನಷ್ಟದ ಅಧಿಕೃತ ಅಂಕಿ ಅಂಶ ಬಿಡುಗಡೆ ಮಾಡಲಾಗುವುದು. ತರುವಾಯ ಪರಿಹಾರ ಕೇಳಲು ಕೇಂದ್ರ ಸರ್ಕಾರಕ್ಕೆ ಪರಿಹಾರಕ್ಕೆ ಮನವಿ ಮಾಡಲಾಗುವುದು. ಸದ್ಯ ಎನ್ ಟಿಆರ್ ಎಫ್ ನಲ್ಲಿ 750 ಕೋಟಿ ಹಣ ಇದ್ದು, ಪರಿಹಾರ ಕಾರ್ಯ ಕೈಗೊಳ್ಳಲು ಹಣದ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಇದೇ ವೇಳೆ ತಿಳಿಸಿದರು. ನಾನು ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವರು ಮಳೆ ಹಾನಿ ಪ್ರದೇಶದ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

Share Post