CrimeDistricts

ಮುರುಘಾ ಪ್ರಕರಣದಿಂದ ಹಿಂದೆ ಸರಿಯಲು 3 ಕೋಟಿ ಆಮಿಷ; ಪರಶುರಾಮ್

ಮೈಸೂರು; ‌ಶಿವಮೂರ್ತಿ ಶರಣರ ಲೈಂಗಿಕ ದೌರ್ಜನ್ಯದ ಆರೋಪ ಪ್ರಕರಣದಿಂದ ಹಿಂದೆ ಸರಿಯುವಂತೆ ಹೇಳಿ 3 ಕೋಟಿ ರೂಪಾಯಿ ಆಮಿಷ ಒಡ್ಡಲಾಗಿತ್ತು ಎಂದು ಒಡನಾಡಿ ಸಂಸ್ಥೆಯ ಪರಶುರಾಂ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿರುವ ಅವರು, ಮಂತ್ರಿಯೊಬ್ಬರು ಸ್ವಾಮೀಜಿಯನ್ನು ಬಿಟ್ಟುಬಿಡಿ ಎಂದು ಹೇಳಿದ್ದರು ಅಂತ ಆರೋಪಿಸಿದ್ದಾರೆ.

ವಿದ್ಯಾರ್ಥಿ ಪದಾಧಿಕಾರಿಗಳ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂತ್ರಸ್ತ ಮಕ್ಕಳು ಗೊಳೋ ಎಂದು ಅಳುತ್ತಿದ್ದರು. ಇತ್ತ ಹಣ ಕೊಡುತ್ತೇವೆ. ಪ್ರಕರಣ ಹಿಂತೆಗೆದುಕೊಳ್ಳಿ ಎಂದು ಆಮಿಷ ಒಡ್ಡಲಾಯಿತು. ನಾಚಿಕೆ ಇಲ್ಲದ ನಾಯಕರೊಬ್ಬರು ಸ್ವಾಮೀಜಿ ಪರವಾಗಿ ಮನವಿ ಮಾಡಿದ್ದರು ಎಂದು ದೂರಿದರು.

Share Post