DistrictsPolitics

ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಅಧಿಕೃತ ಚಾಲನೆ

ಕಲಬುರಗಿ; ಜನವರಿ 11 ರಂದು ಬೆಳಗಾವಿಯಲ್ಲಿ ಗೃಹಜ್ಯೋತಿ ಯೋಜನೆಯನ್ನು ತರೋದಾಗಿ ಆಶ್ವಾಸನೆ ಕೊಟ್ಟಿದ್ದೆವು. ಅದರಂತೆ ಈಗ ಆ ಯೋಜನೆಯನ್ನು ಜಾರಿ ಮಾಡಿದ್ದೇವೆ. ಇಂದು ಅಧಿಕೃತ ಮಾಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆ ಅನುಷ್ಠಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಗ್ಯಾರೆಂಟಿ ಯೋಜನೆಗಳಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತೆ ಅಂತ ಪ್ರಧಾನಿ ನರೇಂದ್ರ ಮೋದಿ ಹೇಳ್ತಿದ್ದಾರೆ. ಅವರು ದೊಡ್ಡ ದೊಡ್ಡವರ ಸಾಲಗಳನ್ನು ಮನ್ನಾ ಮಾಡಿದ್ದಾರೆ. ಆದ್ರೆ ನಾನು ನುಡಿದಂತೆ ಬಡವರಿಗೆ ಯೋಜನೆಗಳನ್ನು ತಲುಪಿಸುತ್ತಿದ್ದೇವೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.

ಇನ್ನು ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ  ಸಿಎಂ  ಸಿದ್ದರಾಮಯ್ಯ,ಇಂಧನ ಸಚಿವ ಕೆಜೆ ಜಾರ್ಜ್‌ ಹಾಗೂ ಶಾಸಕರು, ಹಲವು ಸಚಿವರು ಹಾಜರಿದ್ದರು.

Share Post