CrimeDistricts

ಒಳಮೀಸಲಾತಿಗೆ ವಿರೋಧ; ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ

ಶಿವಮೊಗ್ಗ; ಒಳಮೀಸಲಾತಿ ನೀಡಿ ಕೇಂದ್ರಕ್ಕೆ ಶಿಫಾರಸು ಮಾಡಿರುವುದನ್ನು ವಿರೋಧಿಸಿ ಶಿಕಾರಿಪುರದ ತಾಲ್ಲೂಕು ಬಂಜಾರಾ ಸಮಾಜ ಪ್ರತಿಭಟನೆ ನಡೆಸಿದೆ. ಈ ವೇಳೆ ಕೆಲ ಉದ್ರಿಕ್ತರು ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಯಡಿಯೂರಪ್ಪ ಅವರ ನಿವಾಸದ ಕಾಂಪೌಂಡ್‌ ಗೋಡೆ ಹತ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ಬಂಜಾರಾ ಸಮಾಜದವರು ಏಕಾಏಕಿ ಯಡಿಯೂರಪ್ಪ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಕಲ್ಲು ತೂರಿದ್ದರಿಂದ ಯಡಿಯೂರಪ್ಪ ನಿವಾಸದ ಗಾಜುಗಳು ಪುಡಿಪುಡಿಯಾಗಿದೆ. ಪ್ರತಿಭಟಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಬ್ಯಾರಿಕೇಡ್‌ ಹಾಕಿದ್ದರೂ ಅದನ್ನು ಪ್ರತಿಭಟನಾಕಾರರು ಬೀಳಿಸಿ ಮುನ್ನುಗ್ಗಿದ್ದಾರೆ. ಇದರಿಂದಾಗಿ ಪೊಲೀಸರು ಲಾಠಿ ಪ್ರಹಾರ ನಡೆಸಿದ ಘಟನೆ ನಡೆದಿದೆ.

ಇನ್ನು ಇದೇ ವೇಳೆ ಕೆಲ ಪ್ರತಿಭಟನಾಕಾರರು ಬಿಜೆಪಿಯ ಬ್ಯಾನರ್‌, ಫೆಕ್ಸ್‌ಗಳನ್ನು ಹರಿದುಹಾಕಿದ್ದಾರೆ. ರಸ್ತೆ ಮಧ್ಯೆ ಬೆಂಕಿ ಹಚ್ಚು ಆಕ್ರೋಶ ಹೊರಹಾಕಿದ್ದಾರೆ.

Share Post