DistrictsPolitics

ಬಿಜೆಪಿಯನ್ನು ರಾಜ್ಯದಿಂದ ತೊಲಗಿಸಲು ನಮ್ಮ ಹೋರಾಟ; ಡಿ.ಕೆ.ಶಿವಕುಮಾರ್‌

ಬೆಳಗಾವಿ; ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬ್ರಹ್ಮಾಂಡ ಭ್ರಷ್ಟಾಚಾರ ಮಾಡುತ್ತಿದೆ. ಹೀಗಾಗಿ ಬಿಜೆಪಿಯನ್ನು ರಾಜ್ಯದಿಂದ ತೊಲಗಿಸಲು ಮಾರ್ಚ್‌ 9ರಂದು ನಾವು ರಾಜ್ಯಾದ್ಯಂತ ಹೋರಾಟ ಮಾಡುತ್ತಿದ್ದೇವೆ. ಇದಕ್ಕೆ ಜನರು ಬೆಂಬಲ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮನವಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ರಾಜ್ಯದ ಸ್ವಾಭಿಮಾನ ಉಳಿಸೋದಕ್ಕೆ ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದರು.

ಸರ್ಕಾರ ತರಾತುರಿಯಲ್ಲಿ ಟೆಂಡರ್‌ಗಳನ್ನು ಕರೆಯುತ್ತಿದೆ. ಅರ್ಹತೆ ಇಲ್ಲದವರೆಲ್ಲಾ ಅರ್ಜಿ ಹಾಕಿ ಗುತ್ತಿಗೆ ಪಡೆದಿದ್ದಾರೆ. ಯಾರೆಲ್ಲಾ ಗುತ್ತಿಗೆ ಪಡೆದಿದ್ದಾರೆ ಅನ್ನೋದು ನನಗೆ ಗೊತ್ತಿದೆ. ಇದರ ಹಿಂದೆ ಯಾರೆಲ್ಲಾ ಇದ್ದಾರೆ ಎಂಬುದೂ ನನಗೆ ಗೊತ್ತಿದೆ. ಗುತ್ತಿಗೆ ಪಡೆದವರು, ಅಧಿಕಾರಿಗಳು ಮನೆಗೆ ಹೋಗ್ತಾರೆ ಎಂದು ಡಿ.ಕೆ.ಶಿವಕುಮಾರ್‌ ಎಚ್ಚರಿಸಿದ್ದಾರೆ.

Share Post