DistrictsPolitics

ನಮ್ಮ ಶಾಸಕರು ಒಗ್ಗಟ್ಟು ಪ್ರದರ್ಶಿಸಿ ಕಾಂಗ್ರೆಸ್‌ಗೆ ಉತ್ತರ ಕೊಟ್ಟಿದ್ದಾರೆ; ಹೆಚ್‌.ಡಿ.ಕುಮಾರಸ್ವಾಮಿ

ಹಾಸನ; ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್‌ ನಾಯಕರು ಜೆಡಿಎಸ್‌ನ 13ಕ್ಕೂ ಹೆಚ್ಚು ಶಾಸಕರಿಗೆ ಗಾಳ ಹಾಕಿದ್ದಾರೆ ಎನ್ನಲಾಗಿದೆ. ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಆಪರೇಷನ್‌ ಹಸ್ತಕ್ಕೆ ಕೈಹಾಕಿದ್ದಾರೆ ಎನ್ನಲಾಗುತ್ತಿದೆ. ಈ ನಡುವೆ ಮಾಜಿ ಸಿಎಂ ಕುಮಾರಸ್ವಾಮಿಯವರು ಅಲ್ಲಗೆಳೆದಿದ್ದು, ತಮ್ಮೆಲ್ಲಾ ಅಂದರೆ 19 ಮಂದಿ ಜೆಡಿಎಸ್‌ ಶಾಸಕರನ್ನು ರೆಸಾರ್ಟ್‌ಗೆ ಶಿಫ್ಟ್‌ ಮಾಡಲಾಗಿದೆ. ಈ ನಡುವೆ ಎಲ್ಲಾ ಜೆಡಿಎಸ್‌ ಶಾಸಕರೂ ಹಾಸನಾಂಬೆ ದರ್ಶನ ಕೂಡಾ ಮಾಡಿದ್ದಾರೆ.

ಎಲ್ಲಾ 19 ಜೆಡಿಎಸ್‌ ಶಾಸಕರೂ ಒಟ್ಟಿಗೆ ಹಾಸನಾಂಬೆ ದರ್ಶನ ಪಡೆದು ಒಗ್ಗಟ್ಟು ಪ್ರದರ್ಶನ ಮಾಡಿದ್ದಾರೆ. ಇದೇ ವೇಳೆ ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿಯವರು, ಕಾಂಗ್ರೆಸ್‌ ನಾಯಕರಿಗೆ ನಮ್ಮ ಶಾಸಕರು ಉತ್ತರ ಕೊಟ್ಟಿದ್ದಾರೆ. ಕಾಂಗ್ರೆಸ್‌ ನಾಯಕರು ಜೆಡಿಎಸ್‌ ಪಕ್ಷವನ್ನು ನಾಶ ಮಾಡಲು ಹೊರಟಿದ್ದಾರೆ. ಆದ್ರೆ ಅದು ಸಾಧ್ಯವಿಲ್ಲ ಅನ್ನೋದನ್ನು ನಮ್ಮ ಶಾಸಕರು ತೋರಿಸಿಕೊಟ್ಟಿದ್ದಾರೆ ಎಂದಿದ್ದಾರೆ.

 

Share Post