Districts

ಪಂಚಮಸಾಲಿಗರಿಗೆ ಸಿಎಂ ನ್ಯಾಯ ಒದಗಿಸ್ತಾರೆ; ಆರ್.ಅಶೋಕ್

ಬೆಳಗಾವಿ; ಪಂಚಮಸಾಲಿ ಸಮುದಾಯಕ್ಕೆ ೨ಎ ಮೀಸಲಾತಿ ನೀಡುವ ವಿಚಾರ ಸಂಬಂಧ ಸಿಎಂ ಬೊಮ್ಮಾಯಿಯವರು ನಿನ್ನೆ ಸುದೀರ್ಘವಾದ ಚರ್ಚೆ ನಡೆಸಿದ್ದಾರೆ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಸುವರ್ಣ ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿಎಂ ಬೊಮ್ಮಾಯಿಯವರು ಕಾನೂನು ಇಲಾಖೆಯಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಪಂಚಮಸಾಲಿಗರಿಗೆ ನ್ಯಾಯ ಸಲ್ಲಿಸುತ್ತಾರೆ ಎಂಬ ವಿಶ್ವಾಸ ಇದೆ ಎಂದು ಅಶೋಕ್ ಹೇಳಿದ್ದಾರೆ.

ಒಕ್ಕಲಿಗ ಸಮುದಾಯಕ್ಕೂ ಮೀಸಲಾತಿ ಹೆಚ್ಚಳ‌ ಮಾಡಬೇಕೆಂಬ ಬೇಡಿಕೆ ಇದೆ. ನಿನ್ನೆ ಒಕ್ಕಲಿಗ ಶಾಸಕರೆಲ್ಲಾ ಸಭೆ ಸೇರಿ ಚರ್ಚೆ ಮಾಡಿದ್ದೇನೆ. ಇವತ್ತೂ ಕೂಡಾ ಈ ಬಗ್ಗೆ ಚರ್ಚೆ ಮಾಡಲಿದ್ದೇವೆ ಎಂದು ಅವರು ಹೇಳಿದರು. .

Share Post