Districts

ಸಂತೋಷ್‌ ಸಾವಿನ ದಿನವೇ 29 ಪಿಡಿಒಗಳ ವರ್ಗಾವಣೆ ಆದೇಶ..?

ಮೈಸೂರು: ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ದಿನವೇ ಸಚಿವ ಈಶ್ವರಪ್ಪ ಅವರಿಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾದ ಅನಿವಾರ್ಯತೆ ಬರಬಹುದು ಅಂತ ಅನಿಸಿರಬೇಕು. ಅದಕ್ಕೇ ಸಂತೋಷ್‌ ಸಾವಿನ ದಿನವೇ ಅವರು ಒಟ್ಟು 29 ಪಿಡಿಒಗಳನ್ನು ವರ್ಗಾವಣೆ ಮಾಡಿದ್ದಾರೆ. ಮೈಸೂರು ಭೇಟಿ ವೇಳೆಯೇ ಪಿಡಿಒಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.

ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಮಾಡಿಕೊಂಡ ಸಚಿವ ಈಶ್ವರಪ್ಪ ಅವರು ಮೈಸೂರಿನಲ್ಲಿದ್ದರು. ಈ ವೇಳೆ ವಿಭಾಗವಾರು ಸಭೆ ನಡೆಸಿದ್ದರು. ಈ ಸಭೆಯಲ್ಲಿ ಈಶ್ವರಪ್ಪ ಅವರು 29 ಪಿಡಿಒಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

 

Share Post