DistrictsLifestyle

ಬಾವಿಗೆ ಬಿದ್ದಿದ್ದ ಬೆಕ್ಕಿನ ಮರಿಯನ್ನು ರಕ್ಷಿಸಿದ ಪೇಜಾವರ ಶ್ರೀ

ಉಡುಪಿ;  ಮಠಾಧೀಶರು ಬಂದ ಭಕ್ತರಿಗೆ ಆಶೀರ್ವಾದ ನೀಡೋದು, ಪ್ರವಚನ ನೀಡೋದು ಅಷ್ಟೇ ಮಾಡುತ್ತಾರೆ. ಆದ್ರೆ ಕೆಲವು ಸ್ವಾಮೀಜಿಗಳ ವಿಭಿನ್ನ ನಡೆ ಎಲ್ಲರನ್ನೂ ಆಕರ್ಷಿಸುತ್ತದೆ. ಅದೇ ರೀತಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಕೂಡಾ. ಅವರು ಬಾವಿಗೆ ಬಿದ್ದಿದ್ದ ಬೆಕ್ಕಿನ ಮರಿಯನ್ನು ರಕ್ಷಣೆ ಮಾಡಿ, ಇತರರಿಗೆ ಮಾದರಿಯಾಗಿದ್ದಾರೆ.

ದೇವಸ್ಥಾನದ ಆವರಣದಲ್ಲಿದ್ದ 40 ಅಡಿ ಆಳದ ಬಾವಿಗೆ ಬೆಕ್ಕಿನ ಮರಿ ಬಿದ್ದಿತ್ತು. ಇದನ್ನು ಕಂಡ ಶ್ರೀಗಳು, ಬಾವಿಗಿಳಿದು ಅದನ್ನು ರಕ್ಷಣೆ ಮಾಡಿದ್ದಾರೆ. ಮೊದಲು ಅವರು ಹಗ್ಗಕ್ಕೆ ಬಕೆಟ್‌ ಕಟ್ಟಿ ಬೆಕ್ಕನ್ನು ಮೇಲೆತ್ತಲು ಪ್ರಯತ್ನಿಸಿದರು. ಆದ್ರೆ ಅದು ಸಾಧ್ಯವಾಗಲಿಲ್ಲ. ಹೀಗಾಗಿ ಸ್ವಾಮೀಜಿಯೇ ಹಗ್ಗದ ಸಹಾಯದಿಂದ ಬಾವಿಗಿಳಿದು ಬೆಕ್ಕಿನ ಮರಿಯನ್ನು ಮೇಲೆ ತಂದಿದ್ದಾರೆ. ಈ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ.

 

Share Post