Districts

ಮೊಟ್ಟೆ ವಿವಾದ – ನಮಗೆ ಅರ್ಧ ಸತ್ಯವಷ್ಟೇ ತಿಳಿಸಿದ್ದರು : ಪೇಜಾವರ ಶ್ರೀ

ಉಡುಪಿ : ಪೇಜಾವರ ಶ್ರೀಗಳಾದ ವಿಶ್ವ ಪ್ರಸನ್ನ ತೀರ್ಥ ಸ್ವಾಮಿಗಳು ಮಾಧ್ಯಮದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ನನ್ನ ಹೇಳಿಕೆಯನ್ನು ತಿರುಚಲಾಗಿದೆ. ನಮಗೆ ಮೊಟ್ಟೆ ವಿಷಯಕ್ಕೆ ಸಂಬಂಧಿಸಿದಂತೆ ಅರ್ಧ ಸತ್ಯವಷ್ಟೇ ಹೇಳಿದ್ದರು ಎಂದು ಪೇಜಾವರ ಶ್ರೀಗಳು ಮಾಧ್ಯಮದ ವಿರುದ್ಧ ಕಿಡಿಕಾರಿದ್ದಾರೆ.

ಮಾಧ್ಯಮ ಪ್ರತಿನಿಧಿಗಳು ಬಂದು ಶಾಲೆಯಲ್ಲಿ ಎಲ್ಲಾ ಮಕ್ಕಳಿಗೆ ಮೊಟ್ಟೆ ನೀಡಲು ಸರ್ಕಾರ ನಿರ್ಧರಿಸಿದೆ. ಇದಕ್ಕೆ ಸಂಬಂಧಿಸಿದಂತೆ ನಿಮ್ಮ ಅಭಿಪ್ರಾಯವೇನು ಎಂದು ಕೇಳಿದ್ದರು. ಸಸ್ಯಹಾರಿಗಳಿಗೆ ಮೊಟ್ಟೆ ನೀಡುವುದು ಸರಿಯಲ್ಲ ಎಂದು ನಾನು ಹೇಳಿದ್ದೆ. ಆದರೆ ಸಸ್ಯಹಾರಿಗಳಿಗೆ ಬಾಳೆಹಣ್ಣು ನೀಡ್ತಾರೆ ಅನ್ನೋ ಸತ್ಯವನ್ನು ಮುಚ್ಚಿಟ್ಟಿರುವುದು ಮಾಧ್ಯಮ ಪ್ರತಿನಿಧಿಗಳು ಮಾಡಿರುವ ತಪ್ಪು.

ಮಾಧ್ಯಮದವರು ಸಮಾಜ ಕಟ್ಟುವಲ್ಲಿ ಕೈ ಜೋಡಿಸಬೇಕು ಎಂದು ಪೇಜಾವರ ಶ್ರೀಗಳು ಅಸಮಾಧಾನ ಹೊರಹಾಕಿದ್ದಾರೆ.

Share Post