Districts

ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ಗೆ ಪ್ರತಿಭಟನೆಯ ಬಿಸಿ

ಮಂಗಳೂರು; ಮಂಗಳೂರಿನಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ಗೆ ಪ್ರತಿಭಟನೆಯ ಬಿಸಿ ಎದುರಾಗಿದೆ. ನೂತನ ಕಾಲೇಜು ಕಟ್ಟಡ ಶಿಲಾನ್ಯಾಸಕ್ಕೆ ಆಗಮಿಸಿದ್ದ ಶಿಕ್ಷಣ ಸಚಿವ ನಾಗೇಶ್‌ ಅವರ ವಿರುದ್ಧ ಸಿಎಫ್‌ಐ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಗೋ ಬ್ಯಾಕ್‌ ಬಿ.ಸಿ.ನಾಗೇಶ್‌ ಎಂದು ಘೋಷಣೆ ಕೂಗಿದ್ದು, ಇದರಿಂದಾಗಿ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

 

ಮಂಗಳೂರಿನ ಹಂಪನಕಟ್ಟೆ ಬಳಿಯ ಪದವಿ ಪೂರ್ವ ಕಾಲೇಜು ಕಟ್ಟಡ ಶಿಲಾನ್ಯಾಸಕ್ಕೆ ಸಚಿವ ಬಿ.ಸಿ.ನಾಗೇಶ್‌ ಆಗಮಿಸಿದ್ದರು. ಈ ವೇಳೆ ಸಿಎಫ್ಐ ಕಾರ್ಯಕರ್ತರು ಶಿಕ್ಷಣ ಸಚಿವರಿಗೆ ಗೋ ಬ್ಯಾಕ್ ಘೋಷಣೆ ಕೂಗಿದರು. ಅಲ್ಲದೆ ಕಾರ್ಯಕ್ರಮ ಸ್ಥಳಕ್ಕೆ ನುಗ್ಗಲು ಪ್ರಯತ್ನಿಸಿದರು. ಆಗ ಪೊಲೀಸರು ಪ್ರತಿಭಟನಾಕಾರರನ್ನು ರಸ್ತೆಯಲ್ಲೇ ತಡೆದರು.

 

ಸಮವಸ್ತ್ರ ಹಂಚಿಕೆಯಲ್ಲಿ ಸಚಿವರಿಂದ ಗೋಲ್​ಮಾಲ್ ನಡೆದಿದೆ ಎಂದು ಆರೋಪಿಸಿ ಸಿಎಫ್ಐ ಕಾರ್ಯಕರ್ತರು ಈ ಪ್ರತಿಭಟನೆ ನಡೆಸಿದರು. ಪೊಲೀಸರು ಕೆಲವರು ಪ್ರತಿಭಟನಾಕಾರರನ್ನು ವಶಕ್ಕೆ ತೆಗೆದುಕೊಂಡರು.

 

Share Post