Districts

ಮೈಸೂರು ದಸರಾಗೆ ಪ್ರಧಾನಿ ಬರುವುದಿಲ್ಲ; ಸಚಿವ ಎಸ್‌.ಟಿ.ಸೋಮಶೇಖರ್‌

ಮೈಸೂರು; ಮೈಸೂರು ದಸರಾವನ್ನು ಈ ಬಾರಿ ಅದ್ದೂರಿಯಾಗಿ ನಡೆಸಲಾಗುತ್ತಿದೆ. ಆದ್ರೆ ದಸರಾ ಮಹೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಜಂಬೂಸವಾರಿ ಪುಷ್ಪಾರ್ಚನೆಯನನ್ನು ಪ್ರಧಾನಿ ನರೇಂದ್ರ ಮೋದಿ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದ್ರೆ ಇದು ಸುಳ್ಳು ಸುದ್ದಿ ಎಂದು ಹೇಳಿದರು. 

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದಸರಾದಲ್ಲಿ ಭಾಗವಹಿಸುವ ಕಾರ್ಯಕ್ರಮದ ಪಟ್ಟಿ ಅಂತಿಮವಾಗುತ್ತಿದೆ. ಅವರನ್ನು ಅರಮನೆಯ ಭೇಟಿ ಬಗ್ಗೆ ಈಗಾಗಲೇ ಕೇಳಲಾಗಿದೆ. ಆದರೆ ಇನ್ನೂ ರಾಷ್ಟ್ರಪತಿಗಳಿಂದ ಅಧಿಕೃತ ಒಪ್ಪಿಗೆ ಸಿಕ್ಕಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಕೇಂದ್ರದ 4 ಮಂತ್ರಿಗಳು ಬರುವ ಸಾಧ್ಯತೆ ಇದೆ. ಅದರ ಆಧಾರದ ಮೇಲೆ ವೇದಿಕೆ ಮೇಲೆ ಕುಳಿತುಕೊಳ್ಳುವವರ ಪಟ್ಟಿ ಅಂತಿಮಗೊಳ್ಳುತ್ತದೆ. ದಸರಾ ಪಾಸ್ ಹಾಗೂ ಗೋಲ್ಡ್ ಕಾರ್ಡ್ ಕುರಿತು ಇಂದು ಸಂಜೆಯೊಳಗೆ ಅಂತಿಮ ತೀರ್ಮಾನವಾಗುತ್ತದೆ. ಯುವದಸರಾ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳ ಬಗ್ಗೆ ಮಧ್ಯಾಹ್ನ ಸಭೆ ನಡೆಸಿ ಸಂಜೆಯೊಳಗೆ ತೀರ್ಮಾನವನ್ನು ಅಂತಿಮಗೊಳಿಸಲಾಗುವುದು ಎಂದು ಮಾಹಿತಿ ನೀಡಿದರು.

 

Share Post