CrimeDistricts

ಪೋಕ್ಸೋ ಕೇಸ್‌; ಕೆಲವೇ ಕ್ಷಣಗಳಲ್ಲಿ ಮುರುಘಾ ಶ್ರೀ ಕೋರ್ಟ್‌ಗೆ ಹಾಜರು

ಚಿತ್ರದುರ್ಗ; ಕಳೆದ ರಾತ್ರಿ ಬಂಧಿತರಾಗಿ ಸದ್ಯ ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುರುಘಾ ಶರಣರನ್ನು ಕೆಲವೇ ಕ್ಷಣಗಳಲ್ಲಿ ಕೋರ್ಟ್‌ಗೆ ಹಾಜರುಪಡಿಸಲು ಸಿದ್ಧತೆ ನಡೆಯುತ್ತಿದೆ. ಶ್ರೀಗಳ ಅನಾರೋಗ್ಯ ವಿಚಾರವನ್ನು ಕೋರ್ಟ್‌ಗೆ ತಿಳಿಸದೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಬಗ್ಗೆ ಜೈಲರ್‌ ಕಡೆಯಿಂದ ವಿವರಣೆ ಕೇಳಿದ ಕೋರ್ಟ್‌, ಖುದ್ದು ಆರೋಪಿಯನ್ನು ಕೋರ್ಟ್‌ ಮುಂದೆ ಹಾಜರುಪಡಿಸುವಂತೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಶ್ರೀಗಳನ್ನು ಕೋರ್ಟ್‌ ಮುಂದೆ ಹಾಜರುಪಡಿಸಲಾಗುತ್ತಿದೆ.

ಕೋರ್ಟ್‌ ಅನುಮತಿ ಪಡೆಯದೇ ಯಾಕೆ ಆಸ್ಪತ್ರೆಗೆ ಕರೆದೊಯ್ಯಲಾಯಿತು…? ಎಂದು ೨ನೇ ಹೆಚ್ಚುವರಿ ಸೆಷನ್ಸ್‌ ಕೋರ್ಟ್‌ ಜೈಲರ್‌ಗೆ ಪ್ರಶ್ನೆ ಮಾಡಿದ್ದಾರೆ. ಜೊತೆಗೆ ಆರೋಪಿಯನ್ನು ಖುದ್ದು ಹಾಜರುಪಡಿಸುವಂತೆ ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಶ್ರೀಗಳನ್ನು ಹಾಜರುಪಡಿಸಲಾಗುತ್ತಿದೆ. ಇನ್ನೊಂದಡೆ ಚಿತ್ರದುರ್ಗ ಪೊಲೀಸರು ಶ್ರೀಗಳನ್ನು ಐದು ದಿನಗಳ ಕಾಲ ತಮ್ಮ ಕಸ್ಟಡಿಗೆ ಕೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕೋರ್ಟ್‌ ಆದೇಶ ಏನು ನೀಡುತ್ತೆ ಎಂಬುದರ ಬಗ್ಗೆ ಕುತೂಹಲ ಹೆಚ್ಚಿಸಿದೆ.

Share Post