DistrictsHealth

ಮಲಗಿದಲ್ಲೇ ಪೊಲೀಸ್ ಕಾನ್ಸ್ ಟೆಬಲ್ ಹೃದಯಾಘಾತಕ್ಕೆ ಬಲಿ

ರಾಯಚೂರು; ಸಣ್ಣ ವಯಸ್ಸಿನಲ್ಲೇ ಹೃದಯಾಘಾತಗಳು ಹೆಚ್ಚುತ್ತಿವೆ. ಇದ್ದಕ್ಕಿದ್ದಂತೆ ಕುಸಿದುಬಿದ್ದು ಸಾವನ್ನಪ್ಪುವವರ ಸಂಖ್ಯೆ ಜಾಸ್ತಿಯಾಗಿದೆ. ಮೊನ್ನೆ ಶಾಲಾ ವಿದ್ಯಾರ್ಥಿನಿ ಸಾವನ್ನಪ್ಪಿದ್ದಳು. ಇದೀಗ ಪೊಲೀಸ್ ಕಾನ್ಸ್ ಟೆಬಲ್ ಮೃತಪಟ್ಟಿದ್ದಾರೆ.

ರಾಯಚೂರು ಜಿಲ್ಲೆ ಮಸ್ಕಿ ಠಾಣೆ ಕಾನ್ಸ್ ಟೇಬಲ್ ಬಸನಗೌಡ ಅವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಅವರಿಗೆ ಕೇವಲ 34 ವರ್ಷ ವಯಸ್ಸಾಗಿತ್ತು.

ಬಸನಗೌಡ ಅವರು ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಆಗೋಲಿ ಗ್ರಾಮದ ನಿವಾಸಿ. ಅವರಿಗೆ ಯಾವುದೇ ಅನಾರೋಗ್ಯವಿರಲಿಲ್ಲ. ಆದ್ರೆ ಕಳೆದ ರಾತ್ರಿ ಮಲಗಿದಲ್ಲೇ ಸಾವನ್ನಪ್ಪಿದ್ದಾರೆ.

 

Share Post