CrimeDistricts

ಪೊಲೀಸ್‌ ಕಾನ್ಸ್‌ಟೇಬಲ್‌ ನೇಣಿಗೆ ಶರಣು; ಕಾರಣ ಏನು ಗೊತ್ತಾ..?

ಹುಬ್ಬಳ್ಳಿ; ಯುವ ಪೊಲೀಸ್‌ ಕಾನ್ಸ್‌ಟೇಬಲ್‌ ಒಬ್ಬರು ನೇಣಿಗೆ ಶರಣಾಗಿರುವ ದಾರುಣ ಘಟನೆ ಹುಬ್ಬಳ್ಳಿಯ ಬೆಂಡಿಗೇರಿಯಲ್ಲಿ ನಡೆದಿದೆ. ಇಲ್ಲಿನ ದೊಡ್ಡಮನಿ ಕಾಲೋನಿಯಲ್ಲಿನ ಮನೆಯಲ್ಲಿ ಮಲ್ಲುಕಾರ್ಜುನ ರುದ್ರಾಪುರ ಎಂಬುವವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಳಗಾವಿ ಜಿಲ್ಲೆ ಸಂಗೊಳ್ಳಿ ಗ್ರಾಮದವರಾದ ಮಲ್ಲಿಕಾರ್ಜುನ ರುದ್ರಾಪುರ ಅವರು ಕೆಲ ದಿನಗಳಿಂದ ತೀವ ಅನಾರೋಗ್ಯದಿಂದ ಬಳಲುತ್ತಿದ್ದರು. ಇದ್ರಿಂದ ಖಿನ್ನತೆಗೆ ಒಳಗಾಗಿದ್ದ ಅವರು ತಡರಾತ್ರಿ ಮನೆಯಲ್ಲಿ ಫ್ಯಾನ್‌ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೆಂಡಿಗೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Share Post