DistrictsPolitics

ಇಂದು ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಪ್ರಜಾಧ್ವನಿ ಸಮಾವೇಶ

ಕೋಲಾರ; ಇಂದು ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್‌ ಪ್ರಜಾಧ್ವನಿ ಸಮಾವೇಶ ನಡೆಯಲಿದೆ. ಕೋಲಾರದ ಟಮಕ ಬಳಿ ಮಧ್ಯಾಹ್ನ 12ಕ್ಕೆ ಈ ಸಮಾವೇಶ ನಡೆಯಲಿದೆ.

ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡುತ್ತಿರುವುದರಿಂದ ಈ ಸಮಾವೇಶ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​​, ಡಾ. ಜಿ.ಪರಮೇಶ್ವರ್, ವಿಧಾನ ಪರಿಷತ್​ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್‌ ಮುಂತಾದ ನಾಯಕರು ಭಾಗವಹಿಸಲಿದ್ದಾರೆ. ಇದ್ರಲ್ಲಿ 50 ಸಾವಿರ ಜನ ಸೇರುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ. ಕೋಲಾರ ಮುಗಿದ ನಂತರ ಪ್ರಜಾಧ್ವನಿ ಯಾತ್ರೆ ಚಿಕ್ಕಬಳ್ಳಾಪುರಕ್ಕೆ ಸಾಗಲಿದೆ.

Share Post