Districts

ದೇವನೂರು ಮಹಾದೇವ ಅವರು ಮೈಕ್‌ ಬಿಟ್ಟು, ಪೆನ್ನು ಕೈಗೆತ್ತಿಕೊಳ್ಳಲಿ; ಸಂಸದ ಪ್ರತಾಪ ಸಿಂಹ

ಉಡುಪಿ; ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಸಾಹಿತಿ ದೇವನೂರು ಮಹಾದೇವ ಅವರು ಊಹಾಪೋಹ ಸೃಷ್ಟಿಸುತ್ತಿದ್ದಾರೆ. ಅವರು ಇತ್ತೀಚಿನ ವರ್ಷಗಳಲ್ಲಿ ಪೆನ್ನಿಗೆ ನಿವೃತ್ತಿ ಕೊಟ್ಟಿದ್ದು, ಮೈಕ್‌ ಮುಂದೆ ನಿಂತಿದ್ದಾರೆ. ಅವರು ಮೈಕ್‌ ಬಿಟ್ಟು ಪೆನ್ನು ಕೈಗೆತ್ತಿಕೊಳ್ಳಬೇಕು ಎಂದು ಸಂಸದ ಪ್ರತಾಪ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಅವರು, 2014, 2019ರ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಲ್ಲಿ ದೇವನೂರು ಮಹಾದೇವ ಅವರು ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದರು. ಕುಸುಮಬಾಲೆ ಎಂಬ ಅದ್ಭುತ ಕೃತಿ ಬರೆದಿರುವ ದೇವನೂರು ಬಗ್ಗೆ ಅಪಾರವಾದ ಗೌರವವಿದೆ. ಕಾಂಗ್ರೆಸ್ ಪರ ಪ್ರಚಾರ ಮಾಡುವುದನ್ನು ಬಿಟ್ಟು ಅವರು ಮತ್ತೆ ಪೆನ್‌ ಕೈಗೆತ್ತಿಕೊಂಡು ಅದ್ಭುತ ಕೃತಿ ರಚಿಸಲಿ ಎಂದರು.

 

Share Post