CrimeDistricts

ಅಂತಿಮ ಯಾತ್ರೆಯಲ್ಲಿ ಜನ ಸಾಗರ; ಬೇಕೇಬೇಕು ನ್ಯಾಯ ಬೇಕು ಎಂದು ಘೋಷಣೆ

ಬೆಳ್ಳಾರೆ(ದಕ್ಷಿಣ ಕನ್ನಡ); ಬಿಜೆಪಿ ಯುವ ಮುಖಂಡ ಪ್ರವೀಣ್‌ ಅಂತಿಮ ದರ್ಶನಕ್ಕೆ ಸಾವಿರಾರು ಜನರು ಆಗಮಿಸಿದ್ದಾರೆ. ಎಲ್ಲರೂ ಕೂಡಾ ಕೊಲೆಗಡುಕರ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ನ್ಯಾಯ ಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಶ್ರೀರಾಮ್‌, ಜಯ ರಾಮ್‌ ಎಂದು ಕೂಗುತ್ತಿರುವ ಹಿಂದೂ ಪರ ಕಾರ್ಯಕರ್ತರು, ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸುತ್ತಿದ್ದಾರೆ. ಸ್ಥಳಕ್ಕೆ ಕಲ್ಲಡ್ಕ ಪ್ರಭಾಕರ ಭಟ್‌, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಸಚಿವ ಸುನಿಲ್‌ ಕುಮಾರ್‌ ಸೇರಿದಂತೆ ಹಲವು ನಾಯಕರು ಭೇಟಿ ಕೊಟ್ಟಿದ್ದಾರೆ.

 

Share Post