CrimeDistricts

ಹುಟ್ಟೂರಿನತ್ತ ಪ್ರವೀಣ್‌ ನೆಟ್ಟಾರು ಮೃತದೇಹ; ಮೆರವಣಿಗೆಯಲ್ಲಿ ಸಾವಿರಾರು ಜನ

ದಕ್ಷಿಣ ಕನ್ನಡ; ಕಳೆದ ರಾತ್ರಿ ಕೊಲೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಮೃತದೇಹವನ್ನು ಮೆರವಣಿಗೆ ಮೂಲಕ ಅವರ ಹುಟ್ಟೂರಿಗೆ ಹೋಗಲಾಗುತ್ತಿದೆ. ಬೆಳ್ಳಾರೆಯಿಂದ ನೆಟ್ಟಾರಿಗೆ ಆಂಬುಲೆನ್ಸ್‌ನಲ್ಲಿ ಮೃತದೇಹ ತೆಗೆದುಕೊಂಡು ಹೋಗಲಾಗುತ್ತಿದ್ದು, ಸಾವಿರಾರು ಹಿಂದೂ ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ.

ಮೆರವಣಿಗೆಯಲ್ಲಿ ಸಾವಿರಾರು ಜನ ಪಾಲ್ಗೊಂಡಿದ್ದಾರೆ. ಕೆಲವರು ಬೈಕ್‌, ಕಾರುಗಳಲ್ಲಿ ಆಗಮಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಿಸಲಾಗಿದೆ. ಇನ್ನು ಕಡಬ, ಪುತ್ತೂರು ಹಾಗೂ ಸುಳ್ಯದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

Share Post