Districts

ನಾಡಹಬ್ಬ ದಸರಾಗೆ ರಾಷ್ಟ್ರಪತಿ‌ ದ್ರೌಪದಿ ಮುರ್ಮು ಚಾಲನೆ

ಮೈಸೂರು; ನಾಡಹಬ್ಬ ದಸರಾಗೆ ರಾಷ್ಟ್ರಪತಿ‌ ದ್ರೌಪದಿ ಮುರ್ಮು ಅವರು ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಇದೇ ವೇಳೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕಳೆದ ಎರಡು ವರ್ಷಗಳಿಂದ ಕೊರೊನಾ ಹಿನ್ನೆಲೆಯಲ್ಲಿ ದಸರಾವನ್ನು ಸರಳವಾಗಿ ಆಚರಿಸಲಾಗಿತ್ತು. ಈ ಬಾರಿ ಅದ್ದೂರಿಯಾಗಿ ಆಚರಣೆ ಮಾಡುತ್ತಿದ್ದೇವೆ ಎಂದರು. ನಮ್ಮೊಳಗಿನ ಮಹಿಷಾಸುರ ಗುಣಗಳನ್ನು ತೊಡೆದುಹಾಕಬೇಕು. ಶಾಂತಿ, ಸಹಬಾಳ್ವೆ ನಡೆಸಬೇಕು ಎಂದು ಸಿಎಂ ಇದೇ ವೇಳೆ ಹೇಳಿದರು.

ದಸರಾ ಉದ್ಘಾಟನೆ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೊತ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವಾರು ಗಣ್ಯರು ಹಾಜರಿದ್ದರು. ಇಲ್ಲಿನ ಮಂಡಕಳ್ಳಿ‌ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ‌ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೊತ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬರಮಾಡಿಕೊಂಡರು.

Share Post