Districts

ಮಲೆ ಮಹದೇಶ್ವರ ಬೆಟ್ಟದಲ್ಲಿ ಕುಸಿದುಬಿದ್ದು ಅರ್ಚಕ ಸಾವು

ಚಾಮರಾಜನಗರ; ಪ್ರಸಿದ್ಧ ಯಾತ್ರಾಸ್ಥಳವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ಅರ್ಚಕರೊಬ್ಬರು ಸಾವನ್ನಪ್ಪಿದ್ದಾರೆ. ಇದ್ದಕ್ಕಿದ್ದಂತೆ ಕುಸಿದುಬಿದ್ದು ಅವರು ಅಸುನೀಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ನಲವತ್ತು ವರ್ಷದ ನಾಗಣ್ಣ ಎಂಬ ಅರ್ಚಕರೇ ಇಹಲೋಕ ತ್ಯಜಿಸಿದವರು.

     ಒಂದೂವರೆ ವರ್ಷದ ಬಳಿಕ ಇವರಿಗೆ ಮಾದಪ್ಪನಿಗೆ ಪೂಜೆ ಸಲ್ಲಿಸುವ ಸರದಿ ಬಂದಿತ್ತು. ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ದೇಗುಲವಕ್ಕೆ ತೆರಳಿ ಮಾದಪ್ಪನಿಗೆ ಪೂಜೆ ಮಾಡುತ್ತಿದ್ದರು. ಈ ವೇಳೆ ಹಠಾತ್ತಾಗಿ ಕುಸಿದು ಬಿದ್ದಿದ್ದಾರೆ. ಬಳಿಕ ಆಂಬ್ಯುಲೆನ್ಸ್‌ನಲ್ಲಿ ಹನೂರು ಸರ್ಕಾರಿ ಆಸ್ಪತ್ರೆಗೆ ಕರೆತರುವಾಗ ಮಾರ್ಗಮಧ್ಯೆ ಅಸುನೀಗಿದರು ಎಂದು ತಿಳಿದುಬಂದಿದೆ.

Share Post