DistrictsPolitics

ನೌಕರಿ ಸೇರಲು ಯುವತಿಯರು ಮಂಚ ಹತ್ತಬೇಕಿದೆ; ಪ್ರಿಯಾಂಕ್‌ ಖರ್ಗೆ ವಿವಾದಿತ ಹೇಳಿಕೆ

ಕಲಬುರಗಿ; ರಾಜ್ಯದಲ್ಲಿ ಸರ್ಕಾರಿ ನೌಕರಿ ಸೇರಲು ಯುವತಿಯರು ಮಂಚ ಹತ್ತಬೇಕಾದ ಪರಿಸ್ಥಿತಿ ಇದೆ ಎಂದು ಕಾಂಗ್ರೆಸ್‌ ನಾಯಕ ಪ್ರಿಯಾಂಕ್‌ ಖರ್ಗೆ ವಿವಾದಿತ ಹೇಳಿಕೆ ನೀಡಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿರುವ ಅವರು, ಸರ್ಕಾರಿ ನೌಕರಿಗೆ ಗಿಟ್ಟಿಸಿಕೊಳ್ಳಲು ಯುವಕರು ಲಂಚ ಕೊಡಬೇಕು, ಯುವತಿಯರಾದರೆ ಮಂಚ ಹತ್ತಬೇಕಾದ ಪರಿಸ್ಥಿತಿ ಇದೆ ಎಂದು ಹೇಳಿದ್ದಾರೆ. ಈ ಮೂಲಕ ವಿವಾದಕ್ಕೀಡಾಗಿದ್ದಾರೆ.

ಹಣದ ಕೊಡದೇ ಇದ್ದರೆ ಸರ್ಕಾರದಲ್ಲಿ ಯಾವುದೇ ಕೆಲಸ ಆಗಲ್ಲ. ಕಳೆದ ಮೂರು ವರ್ಷಗಳಲ್ಲಿ ಉದಯೋ ಸೃಷ್ಟಿಯಲ್ಲಿ ರಾಜ್ಯ ಸರ್ಕಾರ ಶೂನ್ಯ ಸಾಧನೆ ಮಾಡಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಲ್ಲ ಎಂದು ಪ್ರಿಯಾಂಕ್‌ ಖರ್ಗೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನೇಮಕಾತಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಹೇಳುವುದಕ್ಕಾಗಿ ಪ್ರಿಯಾಂಕ್‌ ಖರ್ಗೆ ಯುವತಿಯರು ಮಂಚ ಹತ್ತಬೇಕಿದೆ ಎಂಬ ವಾಕ್ಯ ಬಳಸಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದೆ.

Share Post