CrimeDistricts

ಶಿವಮೊಗ್ಗದ ರಾಗಿಗುಡ್ಡದಲ್ಲಿ 6 ದಿನವೂ ನಿಷೇಧಾಜ್ಞೆ ಜಾರಿ

ಶಿವಮೊಗ್ಗ; ಕಳೆದ ಭಾನುವಾರ ಶಿವಮೊಗ್ಗದಲ್ಲಿ ನಡೆದ ಈದ್‌ ಮಿಲಾದ್‌ ಮೆರವಣಿಗೆ ವೇಳೆ ಗಲಾಟೆ ನಡೆದಿತ್ತು. ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿತ್ತು. ಕೆಲವರು ಮನೆಗಳ ಮೇಲೂ ಕಲ್ಲೂ ತೂರಿ ದಾಂದಲೆ ನಡೆಸಿದ್ದರು. ಇದಾಗಿ ಆರು ದಿನಗಳಾಗಿವೆ. ಪರಿಸ್ಥಿತಿ ಹತೋಟಿಗೆ ಬಂದಿದೆ. ಆದ್ರೂ ಗಲಾಟೆ ನಡೆದ ರಾಗಿಗುಡ್ಡ ಪ್ರದೇಶದಲ್ಲಿ ಜನರಲ್ಲಿ ಭೀತಿ ಮಾತ್ರ ಕಡಿಮೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ರಾಗಿಗುಡ್ಡ ಭಾಗದಲ್ಲಿ ಆರನೇ ದಿನವೂ ನಿಷೇಧಾಜ್ಞೆ ಮುಂದುವರೆಸಲಾಗಿದೆ.

ಅಗತ್ಯ ವಸ್ತುಗಳನ್ನು ಕೊಂಡುಕೊಳ್ಳಲು ಮಾತ್ರ ಜನರನ್ನು ಹೊರಗೆ ಬಿಡಲಾಗುತ್ತಿದೆ. ಶಾಲೆ, ಕಾಲೇಜ್, ಉದ್ಯೋಗಕ್ಕೆ ಹೋಗುವವರಿಗೆ ಕೂಡಾ ಅವಕಾಶ ನೀಡಲಾಗಿದೆ. ಜೊತೆಗೆ ರಾಗಿಗುಡ್ಡ ಪ್ರದೇಶದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ.

Share Post