CrimeDistricts

ಶಾಸಕ ರೇಣುಕಾಚಾರ್ಯ ವಿರುದ್ಧ ಜೀವ ಬೆದರಿಕೆ ಆರೋಪ; ಹನುಮಂತಪ್ಪ ಎಂಬುವವರಿಂದ ದೂರು

ದಾವಣಗೆರೆ; ಹೊನ್ನಾಳಿ ಶಾಸಕ ರೇಣುಕಾಚಾರ್ಯ ವಿರುದ್ಧ ಜೀವ ಬೆದರಿಕೆ ಆರೋಪ ಕೇಳಿಬಂದಿದೆ. ಭ್ರಷ್ಟಾಚಾರ ವಿರೋಧಿ ವೇದಿಕೆಯ ಸಂಘಟನಾ ಕಾರ್ಯದರ್ಶಿ ಹನುಮಂತಪ್ಪ ಸೊರಟೂರು ಎಂಬುವವರು ದಾವಣಗೆರೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಿಷ್ಯಂತ್​​ಗೆ ದೂರು ನೀಡಿದ್ದು, ರಕ್ಷಣೆ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಹೊನ್ನಾಳಿ ಕ್ಷೇತ್ರದಲ್ಲಿ ಹಲವಾರು ಕಾಮಗಾರಿಗಳು ಕಳಪೆಯಿಂದ ಕೂಡಿವೆ ಎಂದು ಹನುಮಂತಪ್ಪ ಆರೋಪ ಮಾಡಿದ್ದರು. ಇದರಿಂದ ಕುಪಿತಗೊಂಡ ಶಾಸಕರು, ಎಚ್ಚರದಿಂದ ಇರುವಂತೆ ವಾರ್ನಿಂಗ್‌ ಮಾಡಿದ್ದಾರೆ ಎಂದು ಹನುಮಂತಪ್ಪ ಆರೋಪ ಮಾಡಿದ್ದಾರೆ. ಜೊತೆಗೆ ನಮ್ಮ ಸಂಘಟನೆ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿದ್ದಾರೆ ಎಂದೂ ಹನುಮಂತಪ್ಪ ಆರೋಪಿಸಿದ್ದಾರೆ.

Share Post