Districts

ಮೋದಿ ಜೈಕಾರ ಕೂಗುತ್ತಾ ದೊಡ್ಡಬಳ್ಳಾಪುರ ಜಿಲ್ಲೆ ಮಾಡಲು ಒತ್ತಾಯ; ವಶಕ್ಕೆ

ದೊಡ್ಡಬಳ್ಳಾಪುರ; ಪ್ರಧಾನಿ ನರೇಂದ್ರ ಮೋದಿಗೆ ಜೈಕಾರ ಹಾಕುತ್ತಲೇ, ದೊಡ್ಡಬಳ್ಳಾಪುರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕೆಂದು ಒತ್ತಾಯಿಸಿ ವೇದಿಕೆಯತ್ತ ತೆರಳುತ್ತಿದ್ದ 45ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.

   ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ದೊಡ್ಡಬಳ್ಳಾಪುರವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕೆಂದು ಆಗ್ರಹಿಸಿದರು. ಹತ್ತಾರು ಜನ ಸೇರಿ ಮೋದಿಗೆ ಜೈಕಾರ ಕೂಗಿದರು. ಜೊತೆಗೆ ಜಿಲ್ಲಾ ಕೇಂದ್ರಕ್ಕೆ ಆಗಹಿಸಿದರು. ಎಲ್ಲರೂ ವೇದಿಕೆಯತ್ತ ನುಗ್ಗಲು ಯತ್ನಿಸಿದರು. ಈ ವೇಳೆ  ಪೊಲೀಸರು ದೊಡ್ಡಬಳ್ಳಾಪುರ ನಗರಸಭೆ ಮುಂಭಾಗ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ನೆಲಮಂಗಲಕ್ಕೆ ಕಳುಹಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೇಂದ್ರವನ್ನಾಗಿ ದೊಡ್ಡಬಳ್ಳಾಪುರ ನಗರವನ್ನು ಘೋಷಣೆ ಮಾಡಬೇಕೆಂದು ಒತ್ತಾಯಿಸಿ ಜಿಲ್ಲಾ ಕೇಂದ್ರ ಹೋರಾಟ ಸಮಿತಿ ಕಾರ್ಯಕರ್ತರು ಸಹ ಹೋರಾಟಕ್ಕೆ ಧುಮುಕಿದ್ದಾರೆ. ಬಿಜೆಪಿ ರಾಜ್ಯ ಸರ್ಕಾರ 3 ವರ್ಷಗಳ ಸಾಧನಾ ಸಮಾವೇಶವಾಗಿ ದೊಡ್ಡಬಳ್ಳಾಪುರದಲ್ಲಿ ಇಂದು ಜನಸ್ಪಂದನ ಕಾರ್ಯಕ್ರಮ ಆಯೋಜನೆ ಮಾಡಿದೆ. ಇಂದು ನಡೆಯುತ್ತಿರುವ ಜನಸ್ಪಂದನ ಕಾರ್ಯಕ್ರಮದ ವಿರುದ್ಧ ಸಮಿತಿ ಕರಾಳೋತ್ಸವ ಆಚರಣೆಗೆ ಕರೆ ನೀಡಿದೆ. ಕರಾಳೋತ್ಸವದ ಅಂಗವಾಗಿ ಜಾಥಾ ಹೊರಟ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

Share Post