Districts

ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣ; ಜ್ಞಾನಜ್ಯೋತಿ ಶಾಲೆಯ ಮುಖ್ಯಶಿಕ್ಷಕ ಕಾಶಿನಾಥ್‌ ಶರಣು

ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂದ ಕಲಬುರಗಿಯ ಜ್ಞಾನಜ್ಯೋತಿ ಇಂಗ್ಲಿಷ್‌ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಕಾಶಿನಾಥ ಸಿಐಡಿ ಅಧಿಕಾರಿಗಳ ಮುಂದೆ ಇಂದು ಬೆಳಗ್ಗೆ ಶರಣಾಗಿದ್ದಾರೆ. ಶಾಲೆಯ ಮುಖ್ಯಸ್ಥೆ ದಿವ್ಯಾ ಹಾಗರಗಿಯನ್ನು ಇತ್ತೀಚೆಗೆ ಬಂಧಿಸಲಾಗಿತ್ತು. ಇದಾದ ನಂತರ ತಲೆಮರೆಸಿಕೊಂಡಿದ್ದ ಆರೋಪಿಗಳು ಒಬ್ಬೊಬ್ಬರೇ ಶರಣಾಗುತ್ತಿದ್ದಾರೆ. ಇದೀಗ ಶಾಲೆಯ ಮುಖ್ಯಶಿಕ್ಷಕ ಕಾಶಿನಾಥ್‌ ಕೂಡಾ ಶರಣಾಗಿದ್ದಾರೆ.

ಬಂಧನದಲ್ಲಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ, ಪಡೆತಯತನದ ಶಾಲೆ ಇದಾಗಿದ್ದು, ಈ ಶಾಲೆ ಕೂಡಾ ಪಿಎಸ್‌ಐ ಪರೀಕ್ಷಾ ಕೇಂದ್ರವಾಗಿತ್ತು. ಇಲ್ಲಿ ಅಕ್ರಮ ನಡೆದಿತ್ತೆಂದು ಆರೋಪಿಸಲಾಗಿದೆ. ಇದಕ್ಕೆ ತಮ್ಮ ಶಾಲೆಯ ಮುಖ್ಯಶಿಕ್ಷಕ ಕಾಶಿನಾಥ ಅವರೇ ಯೋಜನೆ ರೂಪಿಸಿದ್ದರು ಎಂದು ವಿಚಾರಣೆ ವೇಳೆ ದಿವ್ಯಾ ಹಾಗರಗಿ ಹೇಳಿಕೆ ನೀಡಿದ ಮರುದಿನವೇ ಕಾಶಿನಾಥ ಶರಣಾಗಿದ್ದಾರೆ. ಪ್ರಕರಣದ ಇನ್ನೊಬ್ಬ ಪ್ರಮುಖ ಆರೋಪಿ, ಜಲಸಂಪನ್ಮೂಲ ಇಲಾಖೆಯ ಸಹಾಯಕ ಎಂಜಿನಿಯರ್‌ ಮಂಜುನಾಥ ಮೇಳಕುಂದಿ ಭಾನುವಾರ ಸಿಐಡಿಗೆ ಶರಣಾಗಿದ್ದರು. ಪ್ರಕರಣ ಬಯಲಿಗೆ ಬರಲು ಕಾರಣರಾಗಿದ್ದ ಶ್ರೀಧರ ಪವಾರ ಅವರನ್ನು ಭಾನುವಾರ ಬಂಧಿಸಲಾಗಿತ್ತು.

Share Post