CrimeDistricts

ಕ್ಷುಲ್ಲಕ ಕಾರಣಕ್ಕೆ ಜಗಳ; ಎಲ್ಲರೆದುರೇ ಯುವಕನನ್ನು ಇರಿದು ಕೊಂದ

ಮಂಡ್ಯ; ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದ ವೇಳೆ ಯುವಕನೊಬ್ಬ ಮತ್ತೊಬ್ಬ ಯುವಕನಿಗೆ ಚಾಕುವಿನಿಂದ ಇರಿದಿದ್ದು, ಆ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮಂಡ್ಯ ಕೆ.ಆರ್‌.ಪೇಟೆ ಬಳಿಯ ಮಲ್ಕೋನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮುವತ್ತೆರಡು ವರ್ಷದ ಯೋಗೇಶ್‌ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದಾರೆ.

ಕೊಲೆಯಾದ ಯೋಗೇಶ್‌ ಹಾಗೂ ಆತನ ತಾಯಿ ಭಾಗ್ಯಮ್ಮ ಜೊತೆ ಪ್ರದೀಪ್‌ ಎಂಬಾತ ಆಗಾಗ ಜಗಳ ತೆಗೆಯುತ್ತಿದ್ದನಂತೆ. ನಿನ್ನೆ ಸಂಜೆ ಕೂಡಾ ಪ್ರದೀಪ್‌ ಜಗಳ ತೆಗೆದಿದ್ದಾನೆ. ಇದು ವಿಕೋಪಕ್ಕೆ ತಿರುಗಿದೆ. ಈ ವೇಳೆ ಪ್ರದೀಪ್‌ ಚಾಕು ತಂದು ಯೋಗೇಶ್‌ಗೆ ಇರಿದಿದ್ದಾನೆ. ಇದರಿಂದಾಗಿ ಯೋಗೇಶ್‌ ತೀವ್ರ ರಕ್ತಸ್ರಾವವಾಗಿ ಕುಸಿದುಬಿದ್ದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಆದ್ರೆ ತೀವ್ರ ರಕ್ತಸ್ರಾವವಾಗಿದ್ದರಿಂದ ಯೋಗೇಶ್‌ ಮೃತಪಟ್ಟಿದ್ದಾನೆ.

ಆರೋಫಿ ಪ್ರದೀಪ್‌ ಕೃತ್ಯ ಎಸಗಿ ಪರಾರಿಯಾಗಿದ್ದಾನೆ. ಕೆ.ಆರ್‌.ಪೇಟೆ ಟೌನ್‌ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

 

Share Post