DistrictsPolitics

ಇಂದು ಬೆಳಗಾವಿಗೆ ರಾಹುಲ್‌ ಗಾಂಧಿ; ಯುವಕರಿಗಾಗಿ ಗ್ಯಾರೆಂಟಿ ಕಾರ್ಡ್‌ ಘೋಷಣೆ

ಬೆಳಗಾವಿ; ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರಕ್ಕೆ ಬರುತ್ತಿದೆ. ಇಷ್ಟು ದಿನ ಬಿಜೆಪಿಯ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಪದೇ ಪದೇ ಬಂದು ಹೋಗುತ್ತಿದ್ದರು. ಇದೀಗ ಕಾಂಗ್ರೆಸ್‌ ಹವಾ ಶುರುವಾಗುತ್ತಿದೆ. ಇಂದು ಬೆಳಗಾವಿಗೆ ರಾಹುಲ್‌ ಗಾಂಧಿ ಆಗಮಿಸುತ್ತಿದ್ದಾರೆ. ಇಲ್ಲಿನ ಸಿಪಿಎಡ್‌ ಮೈದಾನದಲ್ಲಿ ಯುವ ಕ್ರಾಂತಿ ಸಮಾವೇಶ ನಡೆಯಲಿದ್ದು, ಇದಕ್ಕಾಗಿ ಬೃಹತ್‌ ವೇದಿಕೆ ಸಿದ್ಧವಾಗಿದೆ.

ಕಾರ್ಯಕ್ರಮದಲ್ಲಿ ಸುಮಾರು ಐವತ್ತು ಸಾವಿರ ಸಾವಿರಕ್ಕೂ ಹೆಚ್ಚು ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕಿತ್ತೂರು ಕರ್ನಾಟಕ ಭಾಗದ ಹತ್ತು ಸಂಘಟನಾತ್ಮಕ ಜಿಲ್ಲೆಗಳ ಯುವ ಕಾರ್ಯಕರ್ತರು ಈ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ, ಚಿಕ್ಕೋಡಿ, ವಿಜಯಪುರ, ಬಾಗಲಕೋಟೆ, ಧಾರವಾಡ ಗ್ರಾಮೀಣ, ಹುಬ್ಬಳ್ಳಿ ನಗರ, ಗದಗ, ಹಾವೇರಿ, ಉತ್ತರ ಕನ್ನಡ ಭಾಗದ ಯುವ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ‌.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೇರಿದಂತೆ ಹಲವು ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಹುಲ್‌ ಆಗಮನ ಯಾವಾಗ..?

ಮಧ್ಯಾಹ್ನ 12.30ಕ್ಕೆ ಬೆಳಗಾವಿಯ ಸಾಂಬ್ರಾ ಏರ್‌ಪೋರ್ಟ್‌ಗೆ ಆಗಮನ

ಮಧ್ಯಾಹ್ನ 1 ಗಂಟೆಗೆ ಸಿಪಿಎಡ್ ಮೈದಾನಕ್ಕೆ ಕಾರ್ಯಕ್ರಮದಲ್ಲಿ ಭಾಗಿ

ಮಧ್ಯಾಹ್ನ 1 ಗಂಟೆಯಿಂದ 2.30ರವರೆಗೆ ಯುವ ಕ್ರಾಂತಿ ಸಮಾವೇಶ

ಯುವಕರಿಗಾಗಿಯೇ ಕಾಂಗ್ರೆಸ್ ಹೊಸ ಗ್ಯಾರಂಟಿ ಕಾರ್ಡ್‌  ಘೋಷಣೆ

 

Share Post