DistrictsPolitics

ಇಂದು ಚಾಮರಾಜನಗರದಲ್ಲಿ ರಾಹುಲ್‌ ಗಾಂಧಿ ಹವಾ

ಚಾಮರಾಜನಗರ; ಭಾರತ್‌ ಜೋಡೋ ಯಾತ್ರೆ ವೇಳೆ ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಈಗ ಮತ್ತೆ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಇಂದು ನಡೆಯುವ ಕಾಂಗ್ರೆಸ್‌ ಸಮಾವೇಶದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ರಾಹುಲ್‌ ಜೊತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡಾ ಭಾಗವಹಿಸಲಿದ್ದಾರೆ.

ಇಂದು ಮಧ್ಯಾಹ್ನ ೩.೩೦ಕ್ಕೆ ಚಾಮರಾಜನಗರದ ರೇಷ್ಮೆ ಮಾರುಕಟ್ಟೆ ಸಮೀಪದ ಆವರಣದಲ್ಲಿ ಕಾಂಗ್ರೆಸ್‌ ಸಮಾವೇಶ ಆಯೋಜಿಸಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಈ ಸಮಾವೇಶಕ್ಕೆ ಜನರು ಆಗಮಿಸಲಿದ್ದಾರೆ. ಹೀಗಾಗಿ ಬಿಗಿ ಪೊಲೀಸ್‌ ಭದ್ರತೆ ಏರ್ಪಡಿಸಲಾಗಿದೆ. ರಾಹುಲ್‌ ಗಾಂಧಿ ಹಾಗೂ ಖರ್ಗೆಯವರು ವಿಶೇಷ ಹೆಲಿಕಾಪ್ಟರ್‌ ಮೂಲಕ ಚಾಮರಾಜನಗರಕ್ಕೆ ಆಗಮಿಸಲಿದ್ದಾರೆ.

Share Post