CrimeDistricts

ಮಸ್ಕಿ ಬಳಿ ಬೈಕ್‌ಗೆ ಬಸ್‌ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

ರಾಯಚೂರು; ಸರ್ಕಾರಿ ಬಸ್‌ ಒಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಸ್ಕಿ ತಾಲ್ಲೂಕಿನ ಗುಡದೂರು ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಂಧ್ರಪ್ರದೇಶದ ನಂದ್ಯಾಲ ಮೂಲದವರಾದ ನಾಗರಾಜ್ (25), ಸೀನು‌ ಅಲಿಯಾಸ್‌ ಶ್ರೀನಿವಾಸ್‌ (30), ಜಯಪಾಲ್‌ (30) ಅಪಘಾತಕ್ಕೆ ಬಲಿಯಾದ ದುರ್ದೈವಿಗಳು. ಶ್ರೀಕಾಂತ್‌ ಎಂಬಾತ ತೀವ್ರವಾಗಿ ಗಾಯಗೊಂಡಿದ್ದು, ಲಿಂಗಸುಗೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ನಂತರ ಬಸ್‌ ಚಾಲಕ ಬಸ್‌ ನಿಲ್ಲಿಸದೇ ಎಸ್ಕೇಪ್‌ ಆಗಲು ಪ್ರಯತ್ನಿಸಿದ್ದ. ಆದ್ರೆ ಪೊಲೀಸರು ಬಸ್‌ನನ್ನು ಹಿಂಬಾಲಿಸಿ, ವಶಕ್ಕೆ ಪಡೆದಿದ್ದಾರೆ.

Share Post