Districts

ಮಳೆಯಿಂದಾಗಿ ಅವಾಂತರ; ಮನೆಗೋಡೆ ಕುಸಿದು ವ್ಯಕ್ತಿ ಸಾವು

ಚಾಮರಾಜನಗರ; ರಾಜ್ಯದ ಬಹುತೇಕ ಕಡೆ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಚಾಮರಾಜನಗರ ಜಿಲ್ಲೆಯಲ್ಲೂ ಮಳೆಯಿಂದಾಗಿ ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಚಾಮರಾಜನಗರ ತಾಲ್ಲೂಕಿನ ದಡದಹಳ್ಳಿಯಲ್ಲಿ ಮನೆಗೋಡೆ ಕುಸಿದು ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ

 ದಡದಹಳ್ಳಿ ಗ್ರಾಮದ ಮೂರ್ತಿ(32) ಮೃತ ದುರ್ದೈವಿ. ಮೂತ್ರಿ ರಾತ್ರಿ ಮನೆಯಲ್ಲಿ ಮಲಗಿದ್ದರು. ಈ ವೇಳೆ ವಿಪರೀತ ಮಳೆ ಸುರಿದಿದ್ದು, ಹಳೆ ಮನೆಯಾಗಿದ್ದರಿಂದ ಅವರ ಮೇಲೆ ಮನೆಗೋಡೆ ಕುಸಿದುಬಿದ್ದಿದೆ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

Share Post