DistrictsPolitics

ಪ್ರಚಾರದಲ್ಲಿ ರಾಕೇಶ್‌ ಸಿದ್ದರಾಮಯ್ಯ ಪುತ್ರ ; ಮೊಮ್ಮಗನನ್ನು ರಾಜಕೀಯಕ್ಕೆ ಸಿದ್ಧಗೊಳಿಸ್ತಿದ್ದಾರಾ ಸಿದ್ದರಾಮಯ್ಯ..?

ಮೈಸೂರು; ಮಾಜಿ ಸಿಎಂ ಸಿದ್ದರಾಮಯ್ಯ ಅವರು ಚುನಾವಣಾ ಪ್ರಚಾರಕ್ಕೆ ಮೊಮ್ಮಗನನ್ನು ಕರೆದುಕೊಂಡು ಬಂದು ಕುತೂಹಲಕ್ಕೆ ಕಾರಣರಾಗಿದ್ದಾರೆ. ಇಂದು ಮೈಸೂರಿಗೆ ಆಗಮಿಸಿರುವ ಸಿದ್ದರಾಮಯ್ಯ ಅವರು ದಿ.ರಾಕೇಶ್‌ ಸಿದ್ದರಾಮಯ್ಯ ಅವರ ಪುತ್ರ ಧವನ್‌ ರಾಕೇಶ್‌ ಅವರನ್ನು ಜೊತೆಯಲ್ಲಿ ಕರೆದುಕೊಂಡು ಬಂದಿದ್ದಾರೆ. ಧವನ್‌ಗೆ ರಾಜಕೀಯದಲ್ಲಿ ಆಸಕ್ತಿ ಇದ್ದುದ್ದರಿಂದ ಕರೆದುಕೊಂಡು ಬಂದಿದ್ದೇನೆ ಎಂದು ಸಿದ್ದರಾಮಯ್ಯ ಇದೇ ವೇಳೆ ಹೇಳಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಅವರ ಪತ್ರ ರಾಕೇಶ್‌ ಅವರನ್ನು ರಾಜಕೀಯಕ್ಕೆ ತರಲು ತುಂಬಾ ಆಸಕ್ತಿ ಇತ್ತು. ಆದ್ರೆ, ರಾಕೇಶ್‌ ಅಕಾಲಿಕ ಮರಣವನ್ನಪ್ಪಿದರು. ಅನಂತರ ಅನಿವಾರ್ಯವಾಗಿ ಹಿರಿಯ ಮಗ ಯತೀಂದ್ರ ಅವರು ಅಖಾಡಕ್ಕಿಳಿದರು. ಇದೀಗ ರಾಕೇಶ್‌ ಸಿದ್ದರಾಮಯ್ಯ ಅವರ ಪುತ್ರ ಧವನ್‌ ರಾಕೇಶ್‌, ರಾಜಕೀಯ ಪಟ್ಟುಗಳನ್ನು ಕಲಿಯಲು ತಮ್ಮ ಸಜ್ಜನ ಜೊತೆ ಬಂದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಧವನ್‌ಗೆ ರಾಜಕೀಯದ ಬಗ್ಗೆ ಬಹಳ ಆಸಕ್ತಿ ಇದೆ‌. ನಾಮಪತ್ರ ಸಲ್ಲಿಕೆ, ಪ್ರಚಾರ ವೈಖರಿ ಎಲ್ಲವನ್ನೂ ತಿಳಿದುಕೊಳ್ಳಲು ಸ್ವ ಆಸಕ್ತಿಯಿಂದ ನನ್ನ ಜೊತೆ ಬಂದಿದ್ದಾನೆ ಎಂದು ಹೇಳಿದ್ದಾರೆ.

ಧವನ್‌ಗೆ ಇನ್ನೂ 17 ವರ್ಷ. ರಾಜಕೀಯಕ್ಕೆ ಬರಲು ಬಹಳ ಸಮಯವಿದೆ. ಈಗ ಆಸಕ್ತಿಯಿಂದ ಎಲ್ಲವನ್ನೂ ನೋಡಿಕೊಳ್ಳಲು ಬರುತ್ತಿದ್ದಾನೆ. ಮೊಮ್ಮಗನಿಗೆ ರಾಜಕೀಯ ಆಸಕ್ತಿ ಇರುವುದು ತಾತನಾಗಿ ನನಗೆ ಖುಷಿ ಇದೆ. ಪ್ರಚಾರಕ್ಕೆ ಅವನು ಇಷ್ಟ ಪಟ್ಟು ಬಂದರೆ ಬರಲಿ ಎಂದು ಖುಷಿಯಿಂದ ಹೇಳಿದ್ದಾರೆ.

Share Post