Districts

ರಮೇಶ್‌ ಜಾರಕಿಹೊಳಿ ಹಿಟ್‌ ಅಂಡ್‌ ರನ್‌ ಕೇಸ್‌; ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌

ಬೆಳಗಾವಿ: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಹಿಟ್‌ ಅಂಡ್‌ ರನ್‌ ಕೇಸ್‌ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಲೇವಡಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಆತ್ಮಹತ್ಯೆ ಮಾಡಿಕೊಂಡ ಸಂತೋಷ್‌ ಜೊತೆ ನನಗೆ ಒಳ್ಳೆಯ ಸಂಬಂಧ ಇದೆ ಎಂದು ಹೇಳಿದ್ದರು. ಆದ್ರೆ ಈಗ ಹೇಳುತ್ತಿರುವುದೇ ಬೇರೆ ಎಂದು ಕಿಡಿಕಾರಿದರು.

ಸಂತೋಷ್‌ ಆತ್ಮಹತ್ಯೆ ಹಿಂದೆ ನನ್ನ ಸಿಡಿ ಮಾಡಿಸಿರುವ ಮಹಾನಾಯಕನ ಕೈವಾಡವಿದೆ ಎಂದು ರಮೇಶ್‌ ಜಾರಕಿಹೊಳಿ ಆರೋಪಿಸಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌, ಸಂತೋಷ್‌ ಸಾವಿಗೆ ಜಾರಕಿಹೊಳಿಯವರೇ ಕಾರಣ ಆಗಿರಬಹುದು ಎಂದು ದೂರಿದರು.

 

Share Post