CrimeDistricts

ಬಳ್ಳಾರಿಯಲ್ಲಿ ರಿಯಲ್‌ ಎಸ್ಟೇಟ್‌ ಉದ್ಯಮಿ ಭೀಕರ ಕೊಲೆ

ಬಳ್ಳಾರಿ; ಬಳ್ಳಾರಿಯಲ್ಲಿ ಭೀಕರ ಕೊಲೆಯೊಂದು ನಡೆದಿದೆ. ಇಲ್ಲಿನ ರೇಡಿಯೋ ಪಾರ್ಕ್ ಬಳಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಇದರಿಂದಾಗಿ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

   ಅಕ್ಕಿ ಮಂಜು ಎಂಬಾತನೇ ಕೊಲೆಗೀಡಾದ ವ್ಯಕ್ತಿ.  ಕೊಲೆಯಾದ ಮಂಜು ಅಕ್ಕಿ ವ್ಯಾಪಾರ ಮತ್ತು ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದರೆಂದು ಗೊತ್ತಾಗಿದೆ. ತಡರಾತ್ರಿವರೆಗೂ ಮಂಜುಗಾಗಿ ಕಾದು ಕುಳಿತ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಈ ಭೀಕರ ಕೊಲೆಯನ್ನು ನೋಡ್ತಿದ್ದಂತೆ ಅಕ್ಕಪಕ್ಕದಲ್ಲಿ ‌ನಿಂತಿದ್ದವರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ.

Share Post