CinemaDistricts

ಶಾಲಾ ಆವರಣದಲ್ಲೇ ವಿದ್ಯಾರ್ಥಿ ನೇಣಿಗೆ ಶರಣು

ರಾಯಚೂರು; ಎಂಟನೇ ತರಗತಿ ವಿದ್ಯಾರ್ಥಿಯೊಬ್ಬ ಶಾಲಾ ಆವರಣದಲ್ಲಿದ್ದ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಯಚೂರು ಜಿಲ್ಲೆ ಮಸ್ಕಿ ತಾಲ್ಲೂಕಿಮ ಡೊಣಮರಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಲಿಂಗಸೂಗುರು ತಾಲ್ಲೂಕಿನ ಆನ್ವರಿ ಗ್ರಾಮದ ಗಂಗಪ್ಪ ಮಲ್ಲಯ್ಯ (14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಮಾನ್ವಿ ಪಟ್ಟಣದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಬಾಲಕ ಮಸ್ಕಿ ತಾಲ್ಲೂಕಿನ ಮಲ್ಲದಗುಡ್ಡ ಗ್ರಾಮದಲ್ಲಿನ ಸಂಬಂಧಿಕರ ಮನೆಯಲ್ಲಿ ವಾಸವಿದ್ದ. ಅಲ್ಲಿಂದಲೇ ಶಾಲೆಗೆ ಹೋಗುತ್ತಿದ್ದ. ಇಂದು ಬೆಳಗ್ಗೆ ಶಾಲೆಗೆ ಹೋಗವುದಾಗಿ ಹೇಳಿ ಆತ ಮನೆಯಿಂದ ಹೊರಹೋಗಿದ್ದ. ಆದ್ರೆ ಆತ ಡೊಣಮರಡಿ ಸರ್ಕಾರಿ ಶಾಲಾ ಆವರಣಕ್ಕೆ ಬಂದು ಅಲ್ಲಿನ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದ್ರೆ ಇದಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

 

Share Post