DistrictsPolitics

ನಾಳೆ ವಿಧಾನಪರಿಷತ್‌ ಸ್ಥಾನಕ್ಕೆ ರಾಜೀನಾಮೆ; ಲಕ್ಷ್ಮಣ ಸವದಿ

ಹಾವೇರಿ; ಅಥಣಿ ಕ್ಷೇತ್ರದ ಟಿಕೆಟ್‌ ಪಡೆಯುವುದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಈಗ ನಿರಾಸೆಗೊಂಡಿದ್ದಾರೆ. ಅಥಣಿ ಟಿಕೆಟ್‌ ಕೈತಪ್ಪಿದ್ದರಿಂದ ಬಿಜೆಪಿ ಬಿಡುವ ಬಗ್ಗೆ ಚಿಂತನೆ ನಡೆಸಿದ್ದ ಅವರು ಇದೀಗ ಗಟ್ಟಿ ನಿರ್ಧಾರ ಪ್ರಕಟಿಸಿದ್ದಾರೆ. ನಾಳೆ ಅವರು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದಾರೆ.

ಅಥಣಿಯಲ್ಲಿ ಮಾತನಾಡಿರುವ ಲಕ್ಷ್ಮಣ ಸವದಿಯವರು, ನಾಳೆ ನಾನು ಸಭಾಪತಿಯವರನ್ನು ಭೇಟಿಯಾಗುತ್ತಿದ್ದೇನೆ. ನನ್ನ ವಿಧಾನಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ಇನ್ನು ಪಕ್ಷಾಂತರದ ಬಗ್ಗೆಯೂ ಮಾತನಾಡಿರುವ ಅವರು, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಎರಡೂ ಕಡೆಯಿಂದ ಆಹ್ವಾನವಿದೆ. ಆದ್ರೆ ನಾನು ಮೊದಲ ಕಾರ್ಯಕರ್ತರ ಜೊತೆ ಮಾತನಾಡುತ್ತೇನೆ. ಕಾರ್ಯಕರ್ತರು ಹೇಗೆ ಹೇಳುತ್ತಾರೋ ನೋಡಿ, ನಂತರ ಯಾವ ಪಕ್ಷಕ್ಕೆ ಹೋಗಬೇಕು ಎಂಬುದನ್ನು ತೀರ್ಮಾನಿಸುತ್ತೇನೆ ಎಂದು ಹೇಳಿದ್ದಾರೆ.

Share Post