CrimeDistricts

ರೈಲಿಗೆ ಅಡ್ಡ ಮಲಗಿ ನಿವೃತ್ತ ಉಪನ್ಯಾಸಕ ಆತ್ಮಹತ್ಯೆ

ಶಿವಮೊಗ್ಗ; ಸುಮಾರು ಎಪ್ಪತ್ತು ವರ್ಷ ವಯಸ್ಸಿನ ನಿವೃತ್ತ ಉಪನ್ಯಾಸಕರೊಬ್ಬರು ರೈಲಿಗೆ ಅಡ್ಡಲಾಗಿ ಮಲಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ ನಗರದ ವಿನೋಬಾನಗರ ಬಡಾವಣೆ ಬಳಿ ಈ ಘಟನೆ ನಡೆದಿದೆ. ಬೆಳಗ್ಗೆ ವಾಯು ವಿಹಾರಕ್ಕೆಂದು ತೆರಳಿದ್ದ ನಿವೃತ್ತ ಉಪನ್ಯಾಸಕ ವಿಶ್ವನಾಥ್‌ ಅವರು ರೈಲಿಗೆ ತಲೆಕೊಟ್ಟಿದ್ದಾರೆ.

ತಾಳಗುಪ್ಪ-ಬೆಂಗಳೂರು ರೈಲಿಗೆ ಕೆಳಗೆ ಬಿದ್ದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೀವನದಲ್ಲಿ ಜಿಗುಪ್ಸೆಗೊಂಡು ವಿಶ್ವನಾಥ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತದೇಹವನ್ನು ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಲಾಗಿದೆ.

 

Share Post