Districts

ಸಾಮೂಹಿಕ ರಜೆ ಹಾಕಿ ನಾಳೆ ಕಂದಾಯ ಇಲಾಖೆ ನೌಕರರಿಂದ ಪ್ರತಿಭಟನೆ

ಮಂಡ್ಯ:  ಕೆಆರ್‌ಎಸ್ ಪಕ್ಷದ ವಿರುದ್ಧ ಹೋರಾಟಕ್ಕೆ ಅಣಿ ಇಟ್ಟಿರುವ ಮಂಡ್ಯ ಜಿಲ್ಲೆಯ ಕಂದಾಯ ಇಲಾಖೆಯ ನೌಕರರು ನಾಳೆ ಸಾಮೂಹಿಕ ರಜೆ ಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೊರೊನಾ ಲಾಕ್ ಡೌನ್ ಸಮಯದಲ್ಲಿ ಪಾಂಡವಪುರದ ಮಿನಿ ವಿಧಾನಸೌಧದಲ್ಲಿ ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಹಾಗೂ ಕಂದಾಯ ಇಲಾಖೆಯ ನೌಕರರ ನಡುವೆ ಗಲಾಟೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ಹಾಗೂ 15 ನೌಕರರ ಮೇಲೆ ಎಫ್ಐಆರ್ ದಾಖಲಾಗಿತ್ತು.

ಕೆಆರ್ ಎಸ್ ಪಕ್ಷದವರೆ ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆ. ಹೀಗಿರುವಾಗ ನಮ್ಮ ಮೇಲೆಯೆ ಎಫ್ಐಆರ್ ದಾಖಲಿಸಲಾಗಿದೆ ಎಂದು ನೌಕರರ ಸಂಘ ಆರೋಪಿಸಿದೆ. ಈ ನಿಟ್ಟಿನಲ್ಲಿ ನಮಗೆ ರಕ್ಷಣೆ ನೀಡಬೇಕು ಹಾಗೂ ಎಫ್ಐಆರ್ ರದ್ದು ಮಾಡಬೇಕು ಎಂದು ಆಗ್ರಹಿಸಿ ಮಂಡ್ಯ ಜಿಲ್ಲೆಯ ಕಂದಾಯ ಇಲಾಖೆ ನೌಕರರು ನಾಳೆ ಸಾಮೂಹಿಕ ರಜೆ ಹಾಕಿ ಪ್ರತಿಭಟನೆ ನಡೆಸಲಿದ್ದಾರೆ. ಪ್ರತಿಭಟನೆಗೆ ಸಹಕರಿಸಬೇಕೆಂದು ನೌಕರರ ಸಂಘದ ಜಿಲ್ಲಾಧ್ಯಕ್ಷ ತಮ್ಮಣ್ಣಗೌಡ ಮನವಿ ಮಾಡಿದ್ದಾರೆ.

Share Post