CrimeDistricts

ಮದುವೆ ಕಾರ್ಡ್‌ ಕೊಡೋ ನೆಪದಲ್ಲಿ ಬಂದು ದರೋಡೆ; ಇಬ್ಬರ ಬಂಧನ

ದಾವಣಗೆರೆ; ಮದುವೆ ಕಾರ್ಡ್‌ ಕೊಡೋ ನೆಪದಲ್ಲಿ ಬಂದು ದರೋಡೆಗೆ ಪ್ಲ್ಯಾನ್‌ ಮಾಡಿದ್ದ ಇಬ್ಬರು ಖದೀಮರು ಸಿಕ್ಕಿಬಿದ್ದಿದ್ದಾರೆ. ದಾವಣಗೆರೆ ನಗರದ ಕೆಟಿಜೆ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮನೆಯೊಂದರಲ್ಲಿ ಮಹಿಳೆಯೊಬ್ಬರು ಟಿವಿ ನೋಡುತ್ತಿದ್ದರು. ಈ ವೇಳೆ ಇಬ್ಬರು ಯುವಕರು ಮನೆಗೆ ಬಂದಿದ್ದಾರೆ. ಮದುವೆ ಕಾರ್ಡ್‌ ಕೊಡಲು ಬಂದಿದ್ದೇವೆ ಎಂದು ಹೇಳಿ ಮನೆ ಪ್ರವೇಶ ಮಾಡಿದ್ದಾರೆ. ಕೂಡಲೇ ಮಹಿಳೆ ಬಾಯಿ ಮುಚ್ಚಿ, ಕೊರಳಿನಲ್ಲಿದ್ದ ಚಿನ್ನದ ಸರ ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಮಹಿಳೆ ಜೋರಾಗಿ ಕಿರುಚಿಕೊಂಡಿದ್ದು ಅಕ್ಕಪಕ್ಕದವರು ಸ್ಥಳಕ್ಕೆ ಬಂದಿದ್ದಾರೆ. ಕೂಡಲೇ ಕಳ್ಳರು ಮೊಬೈಲ್‌ ಕಿತ್ತುಕೊಂಡು ಪರಾರಿಯಾಗಿದ್ದರು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಕೆಟಿಜೆ ಠಾಣೆ ಪೊಲೀಸರು, ಆರೋಪಿಗಳಾದ ಮಂಜುನಾಥ್‌ ಭಜಂತ್ರಿ ಹಾಗೂ ಪಿ.ಮಂಜುನಾಥ್‌ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Share Post