CrimeDistricts

ಉದ್ಯಮಿ ಕಾರು ಅಡ್ಡಗಟ್ಟಿ 95 ಲಕ್ಷ ರೂಪಾಯಿ ದರೋಡೆ

ದಾವಣಗೆರೆ; ಉದ್ಯಮಿಯ ಕಾರು ಅಡ್ಡಗಟ್ಟಿ ಆತನ ಬಳಿ ಇದ್ದ ಸುಮಾರು 95 ಲಕ್ಷ ರೂಪಾಯಿ ನಗದನ್ನು ದರೋಡೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ ನಡೆದಿದೆ. ದುಬೈನಲ್ಲಿ ತಳಯ ವ್ಯಾಪಾರ ನಡೆಸುವ ನಬೀಲ್ಕೆ ಎಂಬುವವರೇ ಹಣ ಕಳೆದುಕೊಂಡವರು. ನಬೀಲ್ಕೆ ಕುಟುಂಬ ಮಹಾರಾಷ್ಟ್ರದ ಕೊಲ್ಲಾಪುರದಿಂದ ಕಾರಿನಲ್ಲಿ ಕೊಡಗಿನ ವಿರಾಜಪೇಟೆಗೆ ಬರುತ್ತಿದ್ದರು. ಈ ವೇಳೆ ಚನ್ನಗಿರಿ ಬಳಿ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ.

ಚನ್ನಗಿರಿ ತಾಲ್ಲೂಕಿನ ಬೀರೂರು ರಾಜ್ಯ ಹೆದ್ದಾರಿಯಲ್ಲಿನ ಬುಕ್ಕಾಂಬುದಿ ಕೆರೆ ಬಳಿ ದರೋಡೆಕೋರರು ಕಾರನ್ನು ಅಡ್ಡಗಟ್ಟಿ ಹಣ ದೋಚಿದ್ದಾರೆ. ಹತ್ತು ದಿನಗಳ ಹಿಂದೆಯೇ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕೊಲ್ಲಾಪುರ ಜಿಲ್ಲೆಯ ಸಾನೆ ಗುರೂಜಿ ಪಟ್ಟಣದಲ್ಲಿ ನಬೀಲ್ಕೆಯವರ ಕುಟುಂಬ ಚಿನ್ನಾಭರಣದ ಅಂಗಡಿ ನಡೆಸುತ್ತದೆ. ಅಲ್ಲಿ ಅವರು ಚಿನ್ನ ಮಾರಾಟ ಮಾಡಿ, ವಿರಾಜಪೇಟೆಯ ಅಂಗಡಿಗೆ ಹಣದೊಂದಿಗೆ ತೆರಳುತ್ತಿದ್ದರು. 10 ರಿಂದ 15 ಜನ ದರೋಡೆಕೋರರ ತಂಡ ಬುಕ್ಕಾಂಬುದಿ ಕೆರೆ ಬಳಿ ಕಾರನ್ನು ಅಡ್ಡಗಟ್ಟಿ, ಪಿಸ್ತೂಲ್ ತೋರಿಸಿ ಹಣ ದೋಚಿದ್ದಾರೆ.

ಈ ಸಂಬಂಧ ನಬೀಲ್ಕೆ ಅವರು ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Share Post