DistrictsPolitics

ಕೆಆರ್‌ ಪೇಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಗದ್ದಲ; ಬಳೆ ಪ್ರದರ್ಶನ

ಮಂಡ್ಯ; ಸಚಿವ ನಾರಾಯಣಗೌಡ ಕಾಂಗ್ರೆಸ್ ಸೇರ್ತಾರೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಕೆಆರ್‌ ಪೇಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಗದ್ದಲವೆಬ್ಬಿಸಿದ್ದಾರೆ. ಪ್ರಜಾಧ್ವನಿ ಯಾತ್ರೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿತ್ತು. ಈ ಸಭೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು ಮೊದಲು ಅಭ್ಯರ್ಥಿ ಯಾರೆಂದು ಘೋಷಣೆ ಮಾಡಿ ಅಂತ ಆಗ್ರಹ ಮಾಡಿದರು.

ಇದೇ ವೇಳೆ ಮಂಡ್ಯ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಗಂಗಾಧರ್‌ಗೆ ಬಳೆ ನೀಡಿದ್ದಾರೆ. ಗಂಗಾಧರ್‌ಗೆ ಘೇರಾವ್‌ ಹಾಕಿ ಪ್ರತಿಭಟಿಸಿದ ಕಾಂಗ್ರೆಸ್‌ ಕಾರ್ಯಕರ್ತರು, ಸಚಿವ ನಾರಾಯಣಗೌಡ ಕಾಂಗ್ರೆಸ್ ಗೆ ಬಂದು ಅಭ್ಯರ್ಥಿಯಾಗಲಿದ್ದಾರೆಂಬ ವದಂತಿಗೆ ಸ್ಪಷನೆ ಕೊಡುವಂತೆ ಒತ್ತಾಯ ಮಾಡಿದರು. ಕೆಆರ್‌ ಪೇಟೆಯಲ್ಲಿ ಆರು ಜನ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳಿದ್ದಾರೆ. ಒಂದು ವೇಳೆ ನಾರಾಯಣಗೌಡರಿಗೆ ಟಿಕೆಟ್‌ ಕೊಟ್ಟಿರೆ ಎಲ್ಲಾ ಆರು ಆಕಾಂಕ್ಷಿಗಳೂ ಬಳೆ ತೊಟ್ಟುಕೊಳ್ಳಬೇಕಾ ಎಂದು ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ. ಇದರಿಂದಾಗಿ ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

Share Post