Districts

ಸರ್ಕಾರಕ್ಕೆ ರಕ್ತದಲ್ಲಿ ಪತ್ರ ಬರೆದ ಶ್ರೀಗಂಧ ಬೆಳೆಗಾರರು: ಸೂಕ್ತ ಪರಿಹಾರಕ್ಕಾಗಿ ಆಗ್ರಹ

ಚಿಕ್ಕಮಗಳೂರು: ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಸರ್ಕಾರಕ್ಕೆ ರೈತರು ರಕ್ತದಲ್ಲಿ ಪತ್ರ ಬರೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹಳಿಯೂರು ಗ್ರಾಮದಲ್ಲಿ ನಡೆದಿದೆ. ಸಿರೆಂಜ್‌ನಲ್ಲಿ ರಕ್ತ ತೆಗೆದು ಶ್ರೀಗಂಧ ಬೆಳೆಗಾರರಿಂದ ಪತ್ರ ಬರೆಯಲಾಗಿದೆ.

ಹೆದ್ದಾರಿ ಪ್ರಾಧಿಕಾರದಿಂದ ಪರಿಹಾರ ನೀಡುವಂತೆ ಆಗ್ರಹಿಸಿ ಪತ್ರ ಬರೆಯಲಾಗಿದೆ. ಹೆದ್ದಾರಿ ಅಗಲೀಕರಣದ ವೇಳೆ ಭೂಮಿ ಕಳೆದುಕೊಂಡಿರುವ ರೈತರು ಕಳೆದ ಒಂದು ವಾರದಿಂದ ಅರೆಬೆತ್ತಲೆ ಧರಣಿ ನಡೆಸುತ್ತಿದ್ದರು. ಅವರ ಧರಣಿಗೆ ಯಾವುದೇ ರೀತಿಯ ಸರಿಯಾದ ಸ್ಪಂದನೆ ದೊರೆಯದ ಕಾರಣ ಇದೀಗ ರಕ್ತದಿಂದ ಪತ್ರ ಬರೆದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share Post