Districts

ಮಂತ್ರಾಲಯದಲ್ಲಿ ಸಂಕ್ರಾಂತಿ ಸಂಭ್ರಮ ಜೋರು

ರಾಯಚೂರು : ಮಕರ ಸಂಕ್ರಾಂತಿಯ ಪ್ರಯುಕ್ತ ಮಂತ್ರಾಲಯಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ. ಶ್ರೀ ಗುರು ರಾಯರ ದರ್ಶನ ಪಡೆದು ತಮ್ಮ ಇಷ್ಟಾರ್ಥ ಸಿದ್ದಿಸಲೆಂದು ಬೇಡಿಕೊಳ್ಳುತ್ತಿದ್ದಾರೆ. ಸಂಕ್ರಾಂತಿಯ ಹಬ್ಬಕ್ಕೆ ಗುರು ರಾಘವೇಂದ್ರ ಮಠದ ಪೀಠಾಧಿಪತಿ ಆಗಿರುವಂತಹ ಸುಬುಧೇಂದ್ರ ತೀರ್ಥ ಸ್ವಾಮಿ ನಾಡಿನ ಸಮಸ್ತ ಜನತೆಗೆ ಸಂಕ್ರಮಣದ ಶುಭ ಕೋರಿದ್ದಾರೆ.

ಸುಬುಧೇಂದ್ರ ತೀರ್ಥರು ಮಾತನಾಡಿ, ಇಂದು ಮತ್ತು ನಾಳೆ ಸಂಕ್ರಾಂತಿ ಮತ್ತು ಭೋಗಿ ಹಬ್ಬ ನಡೆಯಲಿದೆ, ತುಂಗಭದ್ರ ನದಿಯಲ್ಲಿ ಭಕ್ತರು ಪುಣ್ಯಸ್ನಾನ ಮಾಡಿ ರಾಯರ ದರ್ಶನ ಪಡೆಯಲಿದ್ದಾರೆ. ಈ ಮನುಕುಲಕ್ಕೆ ಅಂಟಿರುವ ಕೊರೊನಾ ಪಿಡುಗು ಆದಷ್ಟು ಬೇಗ ತೊಲಗಲಿ ಎಂದು ಪ್ರಾರ್ಥಿಸೋಣ ಎಂದು ಹೇಳಿದರು. ಜನರು ವೈರಸ್‌ನಿಂದ ಎಚ್ಚರವಾಗಿರಬೇಕು ಎಂದು ಹೇಳಿದ್ದಾರೆ.

ಬೃಂದಾವನದಲ್ಲಿ ಸಂಕ್ರಮಣೋತ್ಸವ ನಡೆಯಲಿದೆ. ಎಲ್ಲರೂ ಲಸಿಕೆ ಹಾಕಿಸಿಕೊಂಡು ಹಬ್ಬ ಹರಿದಿನಗಳಲ್ಲಿ ಭಾಗವಹಿಸುವಂತೆ ಮನವಿ ಮಾಡಿಕೊಂಡರು. ಸದಾ ಮಾಸ್ಕ್‌, ಸ್ಯಾನಿಟೈಸರ್‌ ಬಳಸುವಂತೆಯೂ ಹೇಳಿದ್ದಾರೆ.

Share Post