Districts

ಸಂತೋಷ್‌ ಆತ್ಮಹತ್ಯೆಗೂ ನನಗೂ ಸಂಬಂಧವಿಲ್ಲ; ರಾಜೀನಾಮೆ ನೀಡಲ್ಲ ಎಂದ ಈಶ್ವರಪ್ಪ

ಮೈಸೂರು: ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣಕ್ಕೂ ನನನೂ ಯಾವುದೇ ಸಂಬಂಧ ಇಲ್ಲ ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ವಿನಾಕಾರಣ ನನ್ನ ಮೇಲೆ ಆರೋಪ ಮಾಡಲಾಗಿದೆ. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಹೀಗಾಗಿ ನಾನು ರಾಜೀನಾಮೆ ನೀಡುವ ಅವಶ್ಯಕತೆ ಬರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಗುತ್ತಿಗೆದಾರ ಸಂತೋಷ್‌ ನನ್ನ ವಿರುದ್ಧ ಕಮೀಷನ್‌ ಆರೋಪ ಮಾಡಿದ್ದರು. ಆದ್ರೆ ಅದು ಶುದ್ಧ ಸುಳ್ಳು. ಹೀಗಾಗಿ ನಾನು ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಕೂಡಾ ದಾಖಲಿಸಿದ್ದೇನೆ. ಇದರ ನೋಟಿಸ್‌ ಹೋಗಿದ್ದಕ್ಕೆ ಗಾಬರಿಯಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು. ಈ ಪ್ರಕರಣದ ಬಗ್ಗೆ ಸೂಕ್ತ ತನಿಖೆಗೆ ನಾನೂ ಆಗ್ರಹ ಮಾಡುತ್ತೇನೆ ಎಂದು ಈಶ್ವರಪ್ಪ ಇದೇ ವೇಳೆ ತಿಳಿಸಿದ್ದಾರೆ.

Share Post