Districts

ಸ್ಯಾಂಟ್ರೋ ರವಿ ಬಂಧನ ಹಿನ್ನೆಲೆ; ಹರಕೆ ತೀರಿಸಿದ ಅಲೋಕ್‌ ಕುಮಾರ್‌

ಮೈಸೂರು; ಸ್ಯಾಂಟ್ರೋ ರವಿ ಬಂಧನದ ಹಿನ್ನೆಲೆಯಲ್ಲಿ ಎಡಿಜಿಪಿ ಅಲೋಕ್‌ ಕುಮಾರ್‌ ಅವರು ಇಂದು ನಿಮಿಷಾಂಬ ದೇಗುಲಕ್ಕೆ ಭೇಟಿ ನೀಡಿ ಹರಕೆ ತೀರಿಸಿದ್ದಾರೆ. ಎರಡು ದಿನದ ಹಿಂದೆ ದೇಗುಲಕ್ಕೆ ಭೇಟಿ ನೀಡಿದ್ದ ಅಲೋಕ್‌ ಕುಮಾರ್‌ ಸ್ಯಾಂಟ್ರೋ ರವಿ ಬಂಧನಕ್ಕಾಗಿ ಹರಕೆ ಹೊತ್ತಿದ್ದರು. ಇದೀಗ ಸ್ಯಾಂಟ್ರೋ ರವಿ ಬಂಧನವಾದ ಹಿನ್ನೆಲೆಯಲ್ಲಿ ಹರಕೆ ತೀರಿಸಿದ್ದಾರೆ.

ಸ್ಯಾಂಟ್ರೋ ರವಿ ಶೀಘ್ರವಾಗಿ ಬಂಧನವಾದ್ರೆ ಮತ್ತೆ ಬಂದು ವಿಶೇಷ ಪೂಜೆ ಸಲ್ಲಿಸುವುದಾಗಿ ದೇವಿ ಬಳಿ ಹರಕೆ ಹೊತ್ತಿದ್ದರಂತೆ ಅಲೋಕ್‌ ಕುಮಾರ್.‌ ಇದಾದ 24 ಗಂಟೆಗಳಲ್ಲೇ ಸ್ಯಾಂಟ್ರೋ ರವಿ ಸಿಕ್ಕಿಬಿದ್ದಿದ್ದಾನೆ. ಈ ಹಿನ್ನೆಲೆಯಲ್ಲಿ ಹರಕೆ ತೀರಿಸಿದ್ದಾರೆ.

Share Post