CrimeDistricts

ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ; ಗುರೂಜಿ ಆಪ್ತ ಮಹಾಂತೇಶ್‌ ಪತ್ನಿ ವಶಕ್ಕೆ

ಹುಬ್ಬಳ್ಳಿ; ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಬರ್ಬರವಾಗಿ ಹತ್ಯೆಗೀಡಾದ ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಪ್ರಕರಣ ಸಂಬಂಧ ಮಹಿಳೆಯೊಬ್ಬರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ವನಜಾಕ್ಷಿ ಎಂಬ ಮಹಿಳೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ.

ವನಜಾಕ್ಷಿ ಪತಿ ಮಹಾಂತೇಶ್‌ ಶಿರೋಳ್‌ ಎಂಬಾತ ಕೊಲೆಯಾದ ಚಂದ್ರಶೇಖರ ಗುರೂಜಿಯವರ ಆಪ್ತನಾಗಿದ್ದ. ಈ ಕೊಲೆ ಹಿಂದೆ ಮಹಾಂತೇಶ್‌ ಇದ್ದಾನೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ವನಜಾಕ್ಷಿಯನ್ನು ವಶಕ್ಕೆ ಪಡೆದು ಮಹಾಂತೇಶ್‌ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

Share Post